ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ಅಪಸ್ಮಾರ ದಿನಾಚರಣೆ (ಎಪಿಲೆಪ್ಸಿ ಡೇ) ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಭಿ (KABHI) ತಂಡದ ಸಮ್ಮಿಲಿತ ಆಯೋಜನೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ದೋಡ್ಡಬಳ್ಳಾಪುರದ ಫೈತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ರ್ಯಾಲಿ ನಡೆಸಿದರು. “ಅಪಸ್ಮಾರ ಪಗಡಿನ ವಿಷಯವಲ್ಲ, ಚಿಕಿತ್ಸೆ ಪಡೆಯೋಣ, ಬದುಕು ಬೆಳಗಿಸೋಣ” ಎಂಬ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕಭಿ ತಂಡದ ಅಧಿಕಾರಿಗಳು ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಅಪಸ್ಮಾರ ರೋಗದ ಬಗ್ಗೆ ಇನ್ನೂ ಭ್ರಮೆ ಇದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಜನರಲ್ಲಿ ಅರಿವು ಮೂಡಿಸಿ ಅವರ ಜೀವನಮಟ್ಟ ಸುಧಾರಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು.
ಈ ಯೋಜನೆಯ ಭಾಗವಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇದೇ ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಭಿ ತಂಡ ಮುಂದಾಗಿದೆ ಎಂದು ಹೇಳಿದರು.
ರ್ಯಾಲಿ ಬಳಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಪಸ್ಮಾರದ ಲಕ್ಷಣಗಳು, ಚಿಕಿತ್ಸೆ ಮತ್ತು ತುರ್ತು ನಿರ್ವಹಣೆಯ ಬಗ್ಗೆ ವಿವರಣೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಂಜುನಾಥ್, ಆಯುಷ್ ಡಾ. ಹರಿಣಿ, ಡಾ.ಗಾಯತ್ರಿ, ಡಾ.ಅಮೃತಾ, ನರ್ಸಿಂಗ್ ಸೂಪರಿಂಟೆಂಡೆಂಟ್ಗಳಾದ ಶೈಲಜಾ ಹಾಗೂ ವಂದನಾ, ಕಭಿ ತಂಡದವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…