ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ ಉನ್ನತ ಕಾರ್ಯಕ್ಷಮತೆ ಹೊಂದಿರುವ ತಾಲ್ಲೂಕು ಆಸ್ಪತ್ರೆಗಳಲ್ಲಿ ಒಂದಾಗಿ ರಾಜ್ಯ ಪಟ್ಟಿಯಲ್ಲಿ ಹೆಸರಿಸಲ್ಪಟ್ಟಿದ್ದೇವೆ ಎಂದು ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ ಅವರು ತಿಳಿಸಿದ್ದಾರೆ….

ಎಲ್ಲಾ 300 ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಮತ್ತು ಕಣ್ಣಿನ ವಿಭಾಗವನ್ನು ಶೂನ್ಯದಿಂದ ಮೇಲಕ್ಕೆತ್ತಲು ದೊಡ್ಡ ಪಾತ್ರ ವಹಿಸಿದ CMO ಡಾ.ರಮೇಶ್ ಮತ್ತು ಕಚೇರಿ ವೃಂದದವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು.

ಡಾ.ಮಂಜುನಾಥ್, ಡಾ. ಪರಮೇಶ್ವರ್, ಸ್ಟಾಫ್ ನರ್ಸ್ ಅಲಭ್ಯದಲ್ಲಿ ಇದನ್ನು ಸಾಧ್ಯವಾಗಿಸಿದ್ದಕ್ಕಾಗಿ ಕಾವ್ಯಾ ಮತ್ತು ಈ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತಿದ್ದ ಶಿವಪ್ರಸಾದ್ ಅವರಿಗೆ ಧನ್ಯವಾದಗಳು ಮತ್ತು ಅಭಿನಂದನೆಗಳು ಸಲ್ಲಿಸಿದರು.

ಕಣ್ಣಿನ ಶಸ್ತ್ರಚಿಕಿತ್ಸೆಗಳ ಸಂಖ್ಯೆಗಳನ್ನು ಇನ್ನಷ್ಟು ಹೆಚ್ಚಿಸಲು, ಕಣ್ಣಿನ ಪೊರೆ ರೋಗಿಗಳನ್ನು ಶಸ್ತ್ರಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲು ಎಲ್ಲರಲ್ಲಿ ವಿನಂತಿಸಿದರು.

Leave a Reply

Your email address will not be published. Required fields are marked *

error: Content is protected !!