ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಶಾ ಕಿರಣ ದೃಷ್ಟಿಕೇಂದ್ರಕ್ಕೆ ಚಾಲನೆ

ವಯೋವೃದ್ಧರು, ಬಡಜನರು ಸೇರಿದಂತೆ ಜನಸಾಮಾನ್ಯರ ಕಣ್ಣಿನ ಸುರಕ್ಷತೆಯ ಕಾಳಜಿ ವಹಿಸುವ ಸಲುವಾಗಿ ರಾಜ್ಯ ಸರ್ಕಾರವು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆಶಾಕಿರಣ ಯೋಜನೆಯನ್ನು ಜಾರಿ ಮಾಡಲಾಗಿದೆ. ಇದಕ್ಕೆ ಖುದ್ದು ವಿಶ್ವ ಆರೋಗ್ಯ ಸಂಸ್ಥೆಯೇ ಪ್ರಶಂಸಿಸಿದೆ.

ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ದೃಷ್ಟಿ ಪರೀಕ್ಷೆ ಮಾಡುವುದು, ದೃಷ್ಟಿದೋಷ ಹೊಂದಿದವರಿಗೆ ಉಚಿತ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಮಾಡುವುದು ಸೇರಿದಂತೆ ಸಾರ್ವಜನಿಕರ ಕಣ್ಣಿನ ಆರೈಕೆ ಮಾಡುವ ಉದ್ದೇಶದ ಈ ಯೋಜನೆಯು ಸಮಾಜದಲ್ಲಿ ಧನಾತ್ಮಕ ಬದಲಾವಣೆಗೆ ಕಾರಣವಾಗಿದೆ.

ಈವರೆಗೆ ಒಟ್ಟು 1.40 ಕೋಟಿ ಜನರನ್ನು ನೇತ್ರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 24.50 ಲಕ್ಷ ಜನರಲ್ಲಿ ದೃಷ್ಟಿದೋಷ, ಇನ್ನಿತರೆ ನೇತ್ರದ ತೊಂದರೆಗಳನ್ನು ಪತ್ತೆ ಮಾಡಿ ಉಚಿತ ಚಿಕಿತ್ಸೆ ಒದಗಿಸಲಾಗಿದೆ.

4.30 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 1.05 ಲಕ್ಷ ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಇಂದಿನಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 393 ಆಶಾ ದೃಷ್ಟಿಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಇವುಗಳ ಮೂಲಕವೂ ಸೇವೆಯನ್ನು ಒದಗಿಸಲಾಗುತ್ತದೆ.

ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲೂ‌ ಸಹ ಆಶಾ ದೃಷ್ಟಿಕೇಂದ್ರಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ನೇತ್ರ ತಜ್ಞ ಡಾ.ಅರುಣ್ ಕುಮಾರ್, ನೇತ್ರಾಧಿಕಾರಿ ಶಿವಪ್ರಸಾದ್, ವೈದ್ಯರು, ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

1 hour ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

1 hour ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

21 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

22 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

2 days ago