ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಶಾ ಕಿರಣ ದೃಷ್ಟಿಕೇಂದ್ರಕ್ಕೆ ಚಾಲನೆ

ವಯೋವೃದ್ಧರು, ಬಡಜನರು ಸೇರಿದಂತೆ ಜನಸಾಮಾನ್ಯರ ಕಣ್ಣಿನ ಸುರಕ್ಷತೆಯ ಕಾಳಜಿ ವಹಿಸುವ ಸಲುವಾಗಿ ರಾಜ್ಯ ಸರ್ಕಾರವು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆಶಾಕಿರಣ ಯೋಜನೆಯನ್ನು ಜಾರಿ ಮಾಡಲಾಗಿದೆ. ಇದಕ್ಕೆ ಖುದ್ದು ವಿಶ್ವ ಆರೋಗ್ಯ ಸಂಸ್ಥೆಯೇ ಪ್ರಶಂಸಿಸಿದೆ.

ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ದೃಷ್ಟಿ ಪರೀಕ್ಷೆ ಮಾಡುವುದು, ದೃಷ್ಟಿದೋಷ ಹೊಂದಿದವರಿಗೆ ಉಚಿತ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಮಾಡುವುದು ಸೇರಿದಂತೆ ಸಾರ್ವಜನಿಕರ ಕಣ್ಣಿನ ಆರೈಕೆ ಮಾಡುವ ಉದ್ದೇಶದ ಈ ಯೋಜನೆಯು ಸಮಾಜದಲ್ಲಿ ಧನಾತ್ಮಕ ಬದಲಾವಣೆಗೆ ಕಾರಣವಾಗಿದೆ.

ಈವರೆಗೆ ಒಟ್ಟು 1.40 ಕೋಟಿ ಜನರನ್ನು ನೇತ್ರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 24.50 ಲಕ್ಷ ಜನರಲ್ಲಿ ದೃಷ್ಟಿದೋಷ, ಇನ್ನಿತರೆ ನೇತ್ರದ ತೊಂದರೆಗಳನ್ನು ಪತ್ತೆ ಮಾಡಿ ಉಚಿತ ಚಿಕಿತ್ಸೆ ಒದಗಿಸಲಾಗಿದೆ.

4.30 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 1.05 ಲಕ್ಷ ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಇಂದಿನಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 393 ಆಶಾ ದೃಷ್ಟಿಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಇವುಗಳ ಮೂಲಕವೂ ಸೇವೆಯನ್ನು ಒದಗಿಸಲಾಗುತ್ತದೆ.

ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲೂ‌ ಸಹ ಆಶಾ ದೃಷ್ಟಿಕೇಂದ್ರಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ನೇತ್ರ ತಜ್ಞ ಡಾ.ಅರುಣ್ ಕುಮಾರ್, ನೇತ್ರಾಧಿಕಾರಿ ಶಿವಪ್ರಸಾದ್, ವೈದ್ಯರು, ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

8 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

18 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

19 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago