ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಶಾ ಕಿರಣ ದೃಷ್ಟಿಕೇಂದ್ರಕ್ಕೆ ಚಾಲನೆ

ವಯೋವೃದ್ಧರು, ಬಡಜನರು ಸೇರಿದಂತೆ ಜನಸಾಮಾನ್ಯರ ಕಣ್ಣಿನ ಸುರಕ್ಷತೆಯ ಕಾಳಜಿ ವಹಿಸುವ ಸಲುವಾಗಿ ರಾಜ್ಯ ಸರ್ಕಾರವು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆಶಾಕಿರಣ ಯೋಜನೆಯನ್ನು ಜಾರಿ ಮಾಡಲಾಗಿದೆ. ಇದಕ್ಕೆ ಖುದ್ದು ವಿಶ್ವ ಆರೋಗ್ಯ ಸಂಸ್ಥೆಯೇ ಪ್ರಶಂಸಿಸಿದೆ.

ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ದೃಷ್ಟಿ ಪರೀಕ್ಷೆ ಮಾಡುವುದು, ದೃಷ್ಟಿದೋಷ ಹೊಂದಿದವರಿಗೆ ಉಚಿತ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಮಾಡುವುದು ಸೇರಿದಂತೆ ಸಾರ್ವಜನಿಕರ ಕಣ್ಣಿನ ಆರೈಕೆ ಮಾಡುವ ಉದ್ದೇಶದ ಈ ಯೋಜನೆಯು ಸಮಾಜದಲ್ಲಿ ಧನಾತ್ಮಕ ಬದಲಾವಣೆಗೆ ಕಾರಣವಾಗಿದೆ.

ಈವರೆಗೆ ಒಟ್ಟು 1.40 ಕೋಟಿ ಜನರನ್ನು ನೇತ್ರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 24.50 ಲಕ್ಷ ಜನರಲ್ಲಿ ದೃಷ್ಟಿದೋಷ, ಇನ್ನಿತರೆ ನೇತ್ರದ ತೊಂದರೆಗಳನ್ನು ಪತ್ತೆ ಮಾಡಿ ಉಚಿತ ಚಿಕಿತ್ಸೆ ಒದಗಿಸಲಾಗಿದೆ.

4.30 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 1.05 ಲಕ್ಷ ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಇಂದಿನಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 393 ಆಶಾ ದೃಷ್ಟಿಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಇವುಗಳ ಮೂಲಕವೂ ಸೇವೆಯನ್ನು ಒದಗಿಸಲಾಗುತ್ತದೆ.

ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲೂ‌ ಸಹ ಆಶಾ ದೃಷ್ಟಿಕೇಂದ್ರಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ನೇತ್ರ ತಜ್ಞ ಡಾ.ಅರುಣ್ ಕುಮಾರ್, ನೇತ್ರಾಧಿಕಾರಿ ಶಿವಪ್ರಸಾದ್, ವೈದ್ಯರು, ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

23 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

45 minutes ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago