ಕಳೆದ ಮೂರು ದಿನಗಳಿಂದ ನಡೆದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ ಮಂದಿ ಸ್ಯಾರಿ ಸಂತೆ ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಅಂತಿಮ ದಿನವಾದ ಭಾನುವಾರ ಖ್ಯಾತ ಸಂಗೀತ ಮಾಂತ್ರಿಕ ರಘು ದೀಕ್ಷಿತ್ ತಂಡದಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
2 ಕೋಟಿಗೂ ಅಧಿಕ ವಹಿವಾಟು
ಮೂರು ದಿನಗಳ ಕಾಲ ನಡೆದ ಸ್ಯಾರಿ ಸಂತೆ ಮಹಿಳೆಯ ಮನ ಗೆದ್ದಿದ್ದಲ್ಲದೆ, ಭರ್ಜರಿ ವ್ಯಾಪಾರ ವಹಿವಾಟು ನಡೆದಿದೆ. ಆಯೋಜಕರ ಪ್ರಕಾರ ಸುಮಾರು 2 ಕೋಟಿ ರೂ. ಗು ಅಧಿಕ ವ್ಯಾಪಾರ ಆಗಿದೆ ಎನ್ನಲಾಗಿದೆ.
ಭಾರತದ ಮ್ಯಾಂಜೆಸ್ಚರ್ ಅಂತಾನೇ ದೊಡ್ಡಬಳ್ಳಾಪುರ ನಗರವನ್ನು ಕರೆಯಲಾಗುತ್ತಿದೆ, ನೇಕಾರಿಕೆ ಇಲ್ಲಿನ ಮೂಲ ವೃತ್ತಿ, ಇತ್ತಿಚೇಗೆ ಸೂರತ್ ಸೀರೆಗಳಿಂದ ಇಲ್ಲಿನ ನೇಕಾರಿಕೆ ನೆಲಕಚ್ಚಿತ್ತು, ನೇಕಾರರು ಸಂಕಷ್ಟದಲ್ಲಿದ್ದರು, ದೊಡ್ಡಬಳ್ಳಾಪುರ ಸೀರೆಗಳಿಗೆ ಮಾರುಕಟ್ಟೆಯನ್ನ ಕಲ್ಪಿಸ ಬೇಕೆನ್ನುವ ಉದ್ದೇಶದಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ದೊಡ್ಡಬಳ್ಳಾಪುರ ಸ್ಯಾರಿ ಸಂತೆ ಕಾರ್ಯಕ್ರಮವನ್ನು ಶಾಸಕರಾದ ಧೀರಜ್ ಮುನಿರಾಜು ಅಯೋಜನೆ ಮಾಡಿದ್ದರು.
ಸ್ಯಾರಿ ಸಂತೆಯಲ್ಲಿ ದೊಡ್ಡಬಳ್ಳಾಪುರ ನೇಕಾರರು ತಾವು ನೇಯ್ದ ಸೀರೆಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿತ್ತು, ಸುಮಾರು 75 ಸೀರೆ ಮಾರಾಟ ಮಳಿಗೆಗಳನ್ನ ನೇಕಾರರು ಹಾಕಿದ್ದರು, ಸ್ಯಾರಿ ಸಂತೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ, ಇದರಿಂದ ನೇಕಾರರು ಖುಷಿಗೊಂಡಿದ್ದಾರೆ.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ನಮ್ಮ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ ಸುಧಾಕರ್ ರೈತಪರವಾರ ಕೆಲಸಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಹೈನುಗಾರಿಕೆ, ಫ್ಲೋರಿ ಕಲ್ಚರ್ ಗೆ ಬೋರ್ಡ್ ಸ್ಥಾಪನೆಗೆ ಲೋಕಸಭೆಯಲ್ಲಿ ಖಾಸಗಿ ಬಿಲ್ ಮಂಡಿಸಿದ್ದಾರೆ. ಅದೇ ರೀತಿ ನೇಕಾರರ ಮಳಿಗೆ ಕಟ್ಟಲು ಸರ್ಕಾರದಲ್ಲಿ ಅನುದಾನ ಇಲ್ಲ ನಿಮ್ಮ ಅನುದಾನದಲ್ಲಿ ಹಣ ಮೀಸಲಿಡಬೇಕು ಅದೇ ರೀತಿ ಹ್ಯಾಂಡ್ ಲೂಮ್ ರಿಸರ್ವೇಶನ್ ಆಕ್ಟ್ ನಂತೆ ಪವರ್ ಲೂಂ ರಿಸರ್ವೇಶನ್ ಆಕ್ಟ್ ಜಾರಿಗೆ ತಂದು ನೇಕಾರರ ಸಂಕಷ್ಟ ನೀಗಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…
ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…
ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…