“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ ಮಂದಿ ಸ್ಯಾರಿ ಸಂತೆ ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಅಂತಿಮ ದಿನವಾದ ಭಾನುವಾರ ಖ್ಯಾತ ಸಂಗೀತ ಮಾಂತ್ರಿಕ ರಘು ದೀಕ್ಷಿತ್ ತಂಡದಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

2 ಕೋಟಿಗೂ ಅಧಿಕ ವಹಿವಾಟು

ಮೂರು ದಿನಗಳ ಕಾಲ ನಡೆದ ಸ್ಯಾರಿ ಸಂತೆ ಮಹಿಳೆಯ ಮನ ಗೆದ್ದಿದ್ದಲ್ಲದೆ, ಭರ್ಜರಿ ವ್ಯಾಪಾರ ವಹಿವಾಟು ನಡೆದಿದೆ. ಆಯೋಜಕರ ಪ್ರಕಾರ ಸುಮಾರು 2 ಕೋಟಿ ರೂ. ಗು ಅಧಿಕ ವ್ಯಾಪಾರ ಆಗಿದೆ ಎನ್ನಲಾಗಿದೆ.

ಭಾರತದ ಮ್ಯಾಂಜೆಸ್ಚರ್ ಅಂತಾನೇ ದೊಡ್ಡಬಳ್ಳಾಪುರ ನಗರವನ್ನು ಕರೆಯಲಾಗುತ್ತಿದೆ, ನೇಕಾರಿಕೆ ಇಲ್ಲಿನ ಮೂಲ ವೃತ್ತಿ, ಇತ್ತಿಚೇಗೆ ಸೂರತ್ ಸೀರೆಗಳಿಂದ ಇಲ್ಲಿನ ನೇಕಾರಿಕೆ ನೆಲಕಚ್ಚಿತ್ತು, ನೇಕಾರರು ಸಂಕಷ್ಟದಲ್ಲಿದ್ದರು, ದೊಡ್ಡಬಳ್ಳಾಪುರ ಸೀರೆಗಳಿಗೆ ಮಾರುಕಟ್ಟೆಯನ್ನ ಕಲ್ಪಿಸ ಬೇಕೆನ್ನುವ ಉದ್ದೇಶದಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ದೊಡ್ಡಬಳ್ಳಾಪುರ ಸ್ಯಾರಿ ಸಂತೆ ಕಾರ್ಯಕ್ರಮವನ್ನು ಶಾಸಕರಾದ ಧೀರಜ್ ಮುನಿರಾಜು ಅಯೋಜನೆ ಮಾಡಿದ್ದರು.

ಸ್ಯಾರಿ ಸಂತೆಯಲ್ಲಿ ದೊಡ್ಡಬಳ್ಳಾಪುರ ನೇಕಾರರು ತಾವು ನೇಯ್ದ ಸೀರೆಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿತ್ತು, ಸುಮಾರು 75 ಸೀರೆ ಮಾರಾಟ ಮಳಿಗೆಗಳನ್ನ ನೇಕಾರರು ಹಾಕಿದ್ದರು, ಸ್ಯಾರಿ ಸಂತೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ, ಇದರಿಂದ ನೇಕಾರರು ಖುಷಿಗೊಂಡಿದ್ದಾರೆ.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ನಮ್ಮ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ ಸುಧಾಕರ್ ರೈತಪರವಾರ ಕೆಲಸಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಹೈನುಗಾರಿಕೆ, ಫ್ಲೋರಿ ಕಲ್ಚರ್ ಗೆ ಬೋರ್ಡ್ ಸ್ಥಾಪನೆಗೆ ಲೋಕಸಭೆಯಲ್ಲಿ ಖಾಸಗಿ ಬಿಲ್ ಮಂಡಿಸಿದ್ದಾರೆ. ಅದೇ ರೀತಿ ನೇಕಾರರ ಮಳಿಗೆ ಕಟ್ಟಲು ಸರ್ಕಾರದಲ್ಲಿ ಅನುದಾನ ಇಲ್ಲ ನಿಮ್ಮ ಅನುದಾನದಲ್ಲಿ ಹಣ ಮೀಸಲಿಡಬೇಕು ಅದೇ ರೀತಿ ಹ್ಯಾಂಡ್ ಲೂಮ್ ರಿಸರ್ವೇಶನ್ ಆಕ್ಟ್ ನಂತೆ ಪವರ್ ಲೂಂ ರಿಸರ್ವೇಶನ್ ಆಕ್ಟ್ ಜಾರಿಗೆ ತಂದು ನೇಕಾರರ ಸಂಕಷ್ಟ ನೀಗಿಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದ ಶಾಸಕ ಸಿ.ಬಿ.ಸುರೇಶ್ ಬಾಬು

  *ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

15 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

1 day ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

1 day ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

2 days ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

4 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago