“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ ಮಂದಿ ಸ್ಯಾರಿ ಸಂತೆ ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಅಂತಿಮ ದಿನವಾದ ಭಾನುವಾರ ಖ್ಯಾತ ಸಂಗೀತ ಮಾಂತ್ರಿಕ ರಘು ದೀಕ್ಷಿತ್ ತಂಡದಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

2 ಕೋಟಿಗೂ ಅಧಿಕ ವಹಿವಾಟು

ಮೂರು ದಿನಗಳ ಕಾಲ ನಡೆದ ಸ್ಯಾರಿ ಸಂತೆ ಮಹಿಳೆಯ ಮನ ಗೆದ್ದಿದ್ದಲ್ಲದೆ, ಭರ್ಜರಿ ವ್ಯಾಪಾರ ವಹಿವಾಟು ನಡೆದಿದೆ. ಆಯೋಜಕರ ಪ್ರಕಾರ ಸುಮಾರು 2 ಕೋಟಿ ರೂ. ಗು ಅಧಿಕ ವ್ಯಾಪಾರ ಆಗಿದೆ ಎನ್ನಲಾಗಿದೆ.

ಭಾರತದ ಮ್ಯಾಂಜೆಸ್ಚರ್ ಅಂತಾನೇ ದೊಡ್ಡಬಳ್ಳಾಪುರ ನಗರವನ್ನು ಕರೆಯಲಾಗುತ್ತಿದೆ, ನೇಕಾರಿಕೆ ಇಲ್ಲಿನ ಮೂಲ ವೃತ್ತಿ, ಇತ್ತಿಚೇಗೆ ಸೂರತ್ ಸೀರೆಗಳಿಂದ ಇಲ್ಲಿನ ನೇಕಾರಿಕೆ ನೆಲಕಚ್ಚಿತ್ತು, ನೇಕಾರರು ಸಂಕಷ್ಟದಲ್ಲಿದ್ದರು, ದೊಡ್ಡಬಳ್ಳಾಪುರ ಸೀರೆಗಳಿಗೆ ಮಾರುಕಟ್ಟೆಯನ್ನ ಕಲ್ಪಿಸ ಬೇಕೆನ್ನುವ ಉದ್ದೇಶದಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ದೊಡ್ಡಬಳ್ಳಾಪುರ ಸ್ಯಾರಿ ಸಂತೆ ಕಾರ್ಯಕ್ರಮವನ್ನು ಶಾಸಕರಾದ ಧೀರಜ್ ಮುನಿರಾಜು ಅಯೋಜನೆ ಮಾಡಿದ್ದರು.

ಸ್ಯಾರಿ ಸಂತೆಯಲ್ಲಿ ದೊಡ್ಡಬಳ್ಳಾಪುರ ನೇಕಾರರು ತಾವು ನೇಯ್ದ ಸೀರೆಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿತ್ತು, ಸುಮಾರು 75 ಸೀರೆ ಮಾರಾಟ ಮಳಿಗೆಗಳನ್ನ ನೇಕಾರರು ಹಾಕಿದ್ದರು, ಸ್ಯಾರಿ ಸಂತೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ, ಇದರಿಂದ ನೇಕಾರರು ಖುಷಿಗೊಂಡಿದ್ದಾರೆ.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ನಮ್ಮ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ ಸುಧಾಕರ್ ರೈತಪರವಾರ ಕೆಲಸಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಹೈನುಗಾರಿಕೆ, ಫ್ಲೋರಿ ಕಲ್ಚರ್ ಗೆ ಬೋರ್ಡ್ ಸ್ಥಾಪನೆಗೆ ಲೋಕಸಭೆಯಲ್ಲಿ ಖಾಸಗಿ ಬಿಲ್ ಮಂಡಿಸಿದ್ದಾರೆ. ಅದೇ ರೀತಿ ನೇಕಾರರ ಮಳಿಗೆ ಕಟ್ಟಲು ಸರ್ಕಾರದಲ್ಲಿ ಅನುದಾನ ಇಲ್ಲ ನಿಮ್ಮ ಅನುದಾನದಲ್ಲಿ ಹಣ ಮೀಸಲಿಡಬೇಕು ಅದೇ ರೀತಿ ಹ್ಯಾಂಡ್ ಲೂಮ್ ರಿಸರ್ವೇಶನ್ ಆಕ್ಟ್ ನಂತೆ ಪವರ್ ಲೂಂ ರಿಸರ್ವೇಶನ್ ಆಕ್ಟ್ ಜಾರಿಗೆ ತಂದು ನೇಕಾರರ ಸಂಕಷ್ಟ ನೀಗಿಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

4 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

15 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

15 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

20 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago