ಸರಣಿ ಅಪಘಾತವೊಂದರಲ್ಲಿ ನಾಲ್ಕು ಕಾರುಗಳು ಜಖಂಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಟೋಲ್ ಪ್ಲಾಜಾ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ರಬ್ಬಸಕ್ಕೆ ಕಾರುಗಳು ನಜ್ಜುಗುಜ್ಜಾಗಿವೆ.
ದೊಡ್ಡಬಳ್ಳಾಪುರ-ಹೊಸಕೋಟೆ ಹೆದ್ದಾರಿಯಲ್ಲಿರುವ ಟೋಲ್ ಪ್ಲಾಜಾದ ಬಳಿ ಅಪಘಾತ ಸಂಭವಿಸಿದ್ದು ಟೋಲ್ ಪಾವತಿಸಲು ಸರತಿ ಸಾಲಿನಲ್ಲಿ ಕಾಯುತ್ತಿದ್ದ ಕಾರೊಂದಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಗುದ್ದಿದೆ. ಟ್ರಕ್ಕ್ ನಿಂದ ಗುದ್ದಿಸಿಕೊಂಡ ಕಾರು ತನ್ನ ಮುಂದಿನ ಕಾರಿಗೆ, ಅದು ತಮ್ಮ ಮುಂಭಾದ ಕಾರಿಗೆ ಹೀಗೆ…..4 ಕಾರುಗಳು ಡಿಕ್ಕಿ ಹೊಡೆದುಕೊಂಡು ಜಖಂಗೊಂಡಿವೆ.
ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…