ಸರಣಿ ಅಪಘಾತವೊಂದರಲ್ಲಿ ನಾಲ್ಕು ಕಾರುಗಳು ಜಖಂಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಟೋಲ್ ಪ್ಲಾಜಾ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ರಬ್ಬಸಕ್ಕೆ ಕಾರುಗಳು ನಜ್ಜುಗುಜ್ಜಾಗಿವೆ.
ದೊಡ್ಡಬಳ್ಳಾಪುರ-ಹೊಸಕೋಟೆ ಹೆದ್ದಾರಿಯಲ್ಲಿರುವ ಟೋಲ್ ಪ್ಲಾಜಾದ ಬಳಿ ಅಪಘಾತ ಸಂಭವಿಸಿದ್ದು ಟೋಲ್ ಪಾವತಿಸಲು ಸರತಿ ಸಾಲಿನಲ್ಲಿ ಕಾಯುತ್ತಿದ್ದ ಕಾರೊಂದಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಗುದ್ದಿದೆ. ಟ್ರಕ್ಕ್ ನಿಂದ ಗುದ್ದಿಸಿಕೊಂಡ ಕಾರು ತನ್ನ ಮುಂದಿನ ಕಾರಿಗೆ, ಅದು ತಮ್ಮ ಮುಂಭಾದ ಕಾರಿಗೆ ಹೀಗೆ…..4 ಕಾರುಗಳು ಡಿಕ್ಕಿ ಹೊಡೆದುಕೊಂಡು ಜಖಂಗೊಂಡಿವೆ.
ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…