ದೊಡ್ಡಬೆಳವಂಗಲದಲ್ಲಿ ಮತದಾನ ಕುರಿತು ಅರಿವು ಕಾರ್ಯಕ್ರಮ: ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‍್ಯಾಲಿಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಡಾ. ನಾಗರಾಜು ಅವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.

ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಬೇಕಿದ್ದು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಹಕರಿಸಬೇಕೆಂದು ಉಪಕಾರ್ಯದರ್ಶಿ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಅವರು ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಶೇ.100 ರಷ್ಟು ಮತದಾನವಾಗಬೇಕಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ನೋಂದಾಯಿಸಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತದಾನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ ಅವರು, ದೊಡ್ಡಬೆಳವಂಗಲ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಕಾರ್ಯದರ್ಶಿಗಳು, ಎಸ್.ಡಿ.ಎ.ಎ, ಕರವಸೂಲಿಗಾರರು, ಡಿಇಓಗಳು, ಜಲಗಾರರು, ಕೃಷಿ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಳ ಹೋಬಳಿ ಮಟ್ಟದ ಅಧಿಕಾರಿಗಳು ಮತ್ತು ನರೇಗಾ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

12 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

12 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

15 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago