ದೊಡ್ಡಬೆಳವಂಗಲದಲ್ಲಿ ಮತದಾನ ಕುರಿತು ಅರಿವು ಕಾರ್ಯಕ್ರಮ: ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‍್ಯಾಲಿಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಡಾ. ನಾಗರಾಜು ಅವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.

ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಬೇಕಿದ್ದು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಹಕರಿಸಬೇಕೆಂದು ಉಪಕಾರ್ಯದರ್ಶಿ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಅವರು ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಶೇ.100 ರಷ್ಟು ಮತದಾನವಾಗಬೇಕಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ನೋಂದಾಯಿಸಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತದಾನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ ಅವರು, ದೊಡ್ಡಬೆಳವಂಗಲ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಕಾರ್ಯದರ್ಶಿಗಳು, ಎಸ್.ಡಿ.ಎ.ಎ, ಕರವಸೂಲಿಗಾರರು, ಡಿಇಓಗಳು, ಜಲಗಾರರು, ಕೃಷಿ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಳ ಹೋಬಳಿ ಮಟ್ಟದ ಅಧಿಕಾರಿಗಳು ಮತ್ತು ನರೇಗಾ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

14 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago