ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ

 ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಮಾಗಮವಾಗಿದ್ದು, 2000-2001ರಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ ವಿದ್ಯಾರ್ಥಿಗಳು 24 ವರ್ಷದ ಬಳಿಕ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಸಿರುವುದು ಖುಷಿಯ ಸಂಗತಿ ಎಂದು ಶಿಕ್ಷಕ ಕೆ.ವಿ.ಶಿವರಾಮೇಗೌಡ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳನ್ನು ದಂಡಿಸುತ್ತಿದ್ದೆವು ಆದರೆ, ಈಗ ದಂಡನೆಯೂ ಇಲ್ಲ ಶಿಕ್ಷಣವು ಇಲ್ಲದಂತಾಗಿದೆ.  ಮಕ್ಕಳನ್ನು ದಂಡಿಸಿದರೆ ಪೋಷಕರು ಬಂದು ನಮ್ಮ ಬಳಿ ಗಲಾಟೆ ಮಾಡಿ, ಬೈಯ್ಯುತ್ತಾರೆ. ಮಕ್ಕಳಿಗೆ ಯಾಕೆ ಹೊಡೆದೆ ಎಂದು ನಮ್ಮ ವಿರುದ್ಧ ದೂರು ಕೊಡುತ್ತಾರೆ. ಇಂದಿನ ಕಾಲದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಗದರಿದರೆ ಸಾಕು ಮಕ್ಕಳೇ ಈಗ ದೂರು ನೀಡುತ್ತಾರೆ ಇನ್ನ ಅವರು ಪೋಷಕರು ಅವರಿಗೆ ಬೆಂಬಲ ನೀಡುತ್ತಾರೆ. ಹಿಂದಿನ ಕಾಲದಲ್ಲಿ ಪೋಷಕರೆ ಬಂದು ಅವರಿಗೆ ಹೊಡೆದು ಬುದ್ಧಿ ಕಲಿಸಿ ಉತ್ತಮ ಶಿಕ್ಷಣ ನೀಡಿ ಎಂದು ಹೇಳುತ್ತಿದ್ದರು ಆದರೆ ಈಗ ಅದೆಲ್ಲವೂ ವಿರುದ್ಧವಾಗಿದೆ ಶಿಕ್ಷಣದ ನಿಯಮಗಳು ಬದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, 80ಕ್ಕೂ ಹೆಚ್ಚು ಹಳೇ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ವೇಳೆ ತಮ್ಮ ಶಿಕ್ಷಕರ ಜೊತೆಗೂಡಿ ತಮ್ಮ ಕಲಿಕೆಯ ದಿನಗಳ ಹಲವು ಸವಿನೆನಪುಗಳನ್ನು ಹಂಚಿಕೊಂಡರು.

ಶಿಕ್ಷಕರು ತಮ್ಮ ಮಕ್ಕಳ ಜೊತೆ ಒಡನಾಟ, ಕಲಿಕೆ ಬಗ್ಗೆ ಮಾತನಾಡಿದರು. ದಿನವೀಡಿ ಹಾಡು, ಹರಟೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮಾಡಿ ಖುಷಿ ಪಟ್ಟರು.

ಕಾರ್ಯಕ್ರಮದಲ್ಲಿ 24 ವರ್ಷಗಳ ಹಿಂದೆ ಕಲಿಸಿದ ಶಿಕ್ಷಕರಾದ ಜಿ.ನಾರಾಯಣಪ್ಪ, ಡಿ.ಎಂ.ಕೃಷ್ಣಮೂರ್ತಿ, ಆರ್.ಮಂಜು ರಾಜ್, ಹೆಚ್.ಸಿ. ಲಿಂಗಣ್ಣಯ್ಯ , ಎಂ.ಮಂಜುನಾಥ್, ಎನ್.ಪಿ.ಸುರೇಂದ್ರಬಾಬು, ಸವಿತಾ ಜಿ ನಾಯಕ್, ಮುನಿರತ್ನಮ್ಮ, ಜಿ.ಸಿ.ವೀರಕ್ಯಾತಯ್ಯ, ಬಿರಾದರ್ ಸಾಹೇಬ್ ಗೌಡರನ್ನು ಸನ್ಮಾನಿಸಲಾಯಿತು.

Ramesh Babu

Journalist

Recent Posts

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

7 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

9 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

10 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

11 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

14 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

19 hours ago