ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಮಾಗಮವಾಗಿದ್ದು, 2000-2001ರಲ್ಲಿ ಎಸ್ಎಸ್ಎಲ್ಸಿ ಮುಗಿಸಿದ ವಿದ್ಯಾರ್ಥಿಗಳು 24 ವರ್ಷದ ಬಳಿಕ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಸಿರುವುದು ಖುಷಿಯ ಸಂಗತಿ ಎಂದು ಶಿಕ್ಷಕ ಕೆ.ವಿ.ಶಿವರಾಮೇಗೌಡ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳನ್ನು ದಂಡಿಸುತ್ತಿದ್ದೆವು ಆದರೆ, ಈಗ ದಂಡನೆಯೂ ಇಲ್ಲ ಶಿಕ್ಷಣವು ಇಲ್ಲದಂತಾಗಿದೆ. ಮಕ್ಕಳನ್ನು ದಂಡಿಸಿದರೆ ಪೋಷಕರು ಬಂದು ನಮ್ಮ ಬಳಿ ಗಲಾಟೆ ಮಾಡಿ, ಬೈಯ್ಯುತ್ತಾರೆ. ಮಕ್ಕಳಿಗೆ ಯಾಕೆ ಹೊಡೆದೆ ಎಂದು ನಮ್ಮ ವಿರುದ್ಧ ದೂರು ಕೊಡುತ್ತಾರೆ. ಇಂದಿನ ಕಾಲದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಗದರಿದರೆ ಸಾಕು ಮಕ್ಕಳೇ ಈಗ ದೂರು ನೀಡುತ್ತಾರೆ ಇನ್ನ ಅವರು ಪೋಷಕರು ಅವರಿಗೆ ಬೆಂಬಲ ನೀಡುತ್ತಾರೆ. ಹಿಂದಿನ ಕಾಲದಲ್ಲಿ ಪೋಷಕರೆ ಬಂದು ಅವರಿಗೆ ಹೊಡೆದು ಬುದ್ಧಿ ಕಲಿಸಿ ಉತ್ತಮ ಶಿಕ್ಷಣ ನೀಡಿ ಎಂದು ಹೇಳುತ್ತಿದ್ದರು ಆದರೆ ಈಗ ಅದೆಲ್ಲವೂ ವಿರುದ್ಧವಾಗಿದೆ ಶಿಕ್ಷಣದ ನಿಯಮಗಳು ಬದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, 80ಕ್ಕೂ ಹೆಚ್ಚು ಹಳೇ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ವೇಳೆ ತಮ್ಮ ಶಿಕ್ಷಕರ ಜೊತೆಗೂಡಿ ತಮ್ಮ ಕಲಿಕೆಯ ದಿನಗಳ ಹಲವು ಸವಿನೆನಪುಗಳನ್ನು ಹಂಚಿಕೊಂಡರು.
ಶಿಕ್ಷಕರು ತಮ್ಮ ಮಕ್ಕಳ ಜೊತೆ ಒಡನಾಟ, ಕಲಿಕೆ ಬಗ್ಗೆ ಮಾತನಾಡಿದರು. ದಿನವೀಡಿ ಹಾಡು, ಹರಟೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮಾಡಿ ಖುಷಿ ಪಟ್ಟರು.
ಕಾರ್ಯಕ್ರಮದಲ್ಲಿ 24 ವರ್ಷಗಳ ಹಿಂದೆ ಕಲಿಸಿದ ಶಿಕ್ಷಕರಾದ ಜಿ.ನಾರಾಯಣಪ್ಪ, ಡಿ.ಎಂ.ಕೃಷ್ಣಮೂರ್ತಿ, ಆರ್.ಮಂಜು ರಾಜ್, ಹೆಚ್.ಸಿ. ಲಿಂಗಣ್ಣಯ್ಯ , ಎಂ.ಮಂಜುನಾಥ್, ಎನ್.ಪಿ.ಸುರೇಂದ್ರಬಾಬು, ಸವಿತಾ ಜಿ ನಾಯಕ್, ಮುನಿರತ್ನಮ್ಮ, ಜಿ.ಸಿ.ವೀರಕ್ಯಾತಯ್ಯ, ಬಿರಾದರ್ ಸಾಹೇಬ್ ಗೌಡರನ್ನು ಸನ್ಮಾನಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…