ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಮಾಗಮವಾಗಿದ್ದು, 2000-2001ರಲ್ಲಿ ಎಸ್ಎಸ್ಎಲ್ಸಿ ಮುಗಿಸಿದ ವಿದ್ಯಾರ್ಥಿಗಳು 24 ವರ್ಷದ ಬಳಿಕ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಸಿರುವುದು ಖುಷಿಯ ಸಂಗತಿ ಎಂದು ಶಿಕ್ಷಕ ಕೆ.ವಿ.ಶಿವರಾಮೇಗೌಡ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳನ್ನು ದಂಡಿಸುತ್ತಿದ್ದೆವು ಆದರೆ, ಈಗ ದಂಡನೆಯೂ ಇಲ್ಲ ಶಿಕ್ಷಣವು ಇಲ್ಲದಂತಾಗಿದೆ. ಮಕ್ಕಳನ್ನು ದಂಡಿಸಿದರೆ ಪೋಷಕರು ಬಂದು ನಮ್ಮ ಬಳಿ ಗಲಾಟೆ ಮಾಡಿ, ಬೈಯ್ಯುತ್ತಾರೆ. ಮಕ್ಕಳಿಗೆ ಯಾಕೆ ಹೊಡೆದೆ ಎಂದು ನಮ್ಮ ವಿರುದ್ಧ ದೂರು ಕೊಡುತ್ತಾರೆ. ಇಂದಿನ ಕಾಲದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಗದರಿದರೆ ಸಾಕು ಮಕ್ಕಳೇ ಈಗ ದೂರು ನೀಡುತ್ತಾರೆ ಇನ್ನ ಅವರು ಪೋಷಕರು ಅವರಿಗೆ ಬೆಂಬಲ ನೀಡುತ್ತಾರೆ. ಹಿಂದಿನ ಕಾಲದಲ್ಲಿ ಪೋಷಕರೆ ಬಂದು ಅವರಿಗೆ ಹೊಡೆದು ಬುದ್ಧಿ ಕಲಿಸಿ ಉತ್ತಮ ಶಿಕ್ಷಣ ನೀಡಿ ಎಂದು ಹೇಳುತ್ತಿದ್ದರು ಆದರೆ ಈಗ ಅದೆಲ್ಲವೂ ವಿರುದ್ಧವಾಗಿದೆ ಶಿಕ್ಷಣದ ನಿಯಮಗಳು ಬದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, 80ಕ್ಕೂ ಹೆಚ್ಚು ಹಳೇ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ವೇಳೆ ತಮ್ಮ ಶಿಕ್ಷಕರ ಜೊತೆಗೂಡಿ ತಮ್ಮ ಕಲಿಕೆಯ ದಿನಗಳ ಹಲವು ಸವಿನೆನಪುಗಳನ್ನು ಹಂಚಿಕೊಂಡರು.
ಶಿಕ್ಷಕರು ತಮ್ಮ ಮಕ್ಕಳ ಜೊತೆ ಒಡನಾಟ, ಕಲಿಕೆ ಬಗ್ಗೆ ಮಾತನಾಡಿದರು. ದಿನವೀಡಿ ಹಾಡು, ಹರಟೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮಾಡಿ ಖುಷಿ ಪಟ್ಟರು.
ಕಾರ್ಯಕ್ರಮದಲ್ಲಿ 24 ವರ್ಷಗಳ ಹಿಂದೆ ಕಲಿಸಿದ ಶಿಕ್ಷಕರಾದ ಜಿ.ನಾರಾಯಣಪ್ಪ, ಡಿ.ಎಂ.ಕೃಷ್ಣಮೂರ್ತಿ, ಆರ್.ಮಂಜು ರಾಜ್, ಹೆಚ್.ಸಿ. ಲಿಂಗಣ್ಣಯ್ಯ , ಎಂ.ಮಂಜುನಾಥ್, ಎನ್.ಪಿ.ಸುರೇಂದ್ರಬಾಬು, ಸವಿತಾ ಜಿ ನಾಯಕ್, ಮುನಿರತ್ನಮ್ಮ, ಜಿ.ಸಿ.ವೀರಕ್ಯಾತಯ್ಯ, ಬಿರಾದರ್ ಸಾಹೇಬ್ ಗೌಡರನ್ನು ಸನ್ಮಾನಿಸಲಾಯಿತು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…