ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಮಾಗಮವಾಗಿದ್ದು, 2000-2001ರಲ್ಲಿ ಎಸ್ಎಸ್ಎಲ್ಸಿ ಮುಗಿಸಿದ ವಿದ್ಯಾರ್ಥಿಗಳು 24 ವರ್ಷದ ಬಳಿಕ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಸಿರುವುದು ಖುಷಿಯ ಸಂಗತಿ ಎಂದು ಶಿಕ್ಷಕ ಕೆ.ವಿ.ಶಿವರಾಮೇಗೌಡ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳನ್ನು ದಂಡಿಸುತ್ತಿದ್ದೆವು ಆದರೆ, ಈಗ ದಂಡನೆಯೂ ಇಲ್ಲ ಶಿಕ್ಷಣವು ಇಲ್ಲದಂತಾಗಿದೆ. ಮಕ್ಕಳನ್ನು ದಂಡಿಸಿದರೆ ಪೋಷಕರು ಬಂದು ನಮ್ಮ ಬಳಿ ಗಲಾಟೆ ಮಾಡಿ, ಬೈಯ್ಯುತ್ತಾರೆ. ಮಕ್ಕಳಿಗೆ ಯಾಕೆ ಹೊಡೆದೆ ಎಂದು ನಮ್ಮ ವಿರುದ್ಧ ದೂರು ಕೊಡುತ್ತಾರೆ. ಇಂದಿನ ಕಾಲದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಗದರಿದರೆ ಸಾಕು ಮಕ್ಕಳೇ ಈಗ ದೂರು ನೀಡುತ್ತಾರೆ ಇನ್ನ ಅವರು ಪೋಷಕರು ಅವರಿಗೆ ಬೆಂಬಲ ನೀಡುತ್ತಾರೆ. ಹಿಂದಿನ ಕಾಲದಲ್ಲಿ ಪೋಷಕರೆ ಬಂದು ಅವರಿಗೆ ಹೊಡೆದು ಬುದ್ಧಿ ಕಲಿಸಿ ಉತ್ತಮ ಶಿಕ್ಷಣ ನೀಡಿ ಎಂದು ಹೇಳುತ್ತಿದ್ದರು ಆದರೆ ಈಗ ಅದೆಲ್ಲವೂ ವಿರುದ್ಧವಾಗಿದೆ ಶಿಕ್ಷಣದ ನಿಯಮಗಳು ಬದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, 80ಕ್ಕೂ ಹೆಚ್ಚು ಹಳೇ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ವೇಳೆ ತಮ್ಮ ಶಿಕ್ಷಕರ ಜೊತೆಗೂಡಿ ತಮ್ಮ ಕಲಿಕೆಯ ದಿನಗಳ ಹಲವು ಸವಿನೆನಪುಗಳನ್ನು ಹಂಚಿಕೊಂಡರು.
ಶಿಕ್ಷಕರು ತಮ್ಮ ಮಕ್ಕಳ ಜೊತೆ ಒಡನಾಟ, ಕಲಿಕೆ ಬಗ್ಗೆ ಮಾತನಾಡಿದರು. ದಿನವೀಡಿ ಹಾಡು, ಹರಟೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮಾಡಿ ಖುಷಿ ಪಟ್ಟರು.
ಕಾರ್ಯಕ್ರಮದಲ್ಲಿ 24 ವರ್ಷಗಳ ಹಿಂದೆ ಕಲಿಸಿದ ಶಿಕ್ಷಕರಾದ ಜಿ.ನಾರಾಯಣಪ್ಪ, ಡಿ.ಎಂ.ಕೃಷ್ಣಮೂರ್ತಿ, ಆರ್.ಮಂಜು ರಾಜ್, ಹೆಚ್.ಸಿ. ಲಿಂಗಣ್ಣಯ್ಯ , ಎಂ.ಮಂಜುನಾಥ್, ಎನ್.ಪಿ.ಸುರೇಂದ್ರಬಾಬು, ಸವಿತಾ ಜಿ ನಾಯಕ್, ಮುನಿರತ್ನಮ್ಮ, ಜಿ.ಸಿ.ವೀರಕ್ಯಾತಯ್ಯ, ಬಿರಾದರ್ ಸಾಹೇಬ್ ಗೌಡರನ್ನು ಸನ್ಮಾನಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…