ದೊಡ್ಡಬೆಳವಂಗಲ ಜೋಡಿ ಕೊಲೆ ಪ್ರಕರಣ: ಘಟನೆಗೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ-ಮಾ.ಮುನಿರಾಜು

ತಾಲ್ಲೂಕಿನ ದೊಡ್ಡಬೆಳವಂಗಲ ಜೋಡಿ ಕೊಲೆಯಿಂದಾಗಿ ಶಾಂತಿಯುತವಾಗಿದ್ದ ತಾಲ್ಲೂಕಿನಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ ಎಂದು ದಲಿತ ವಿಮೋಚನಾ‌ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಅಭಿಪ್ರಾಯಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಿಂದೆಂದು ಕೇಳರಿಯದ ಘಟನೆಗಳು ತಾಲ್ಲೂಕಿನಲ್ಲಿ ಸಂಭವಿಸುತ್ತಿದೆ, ತಾಲ್ಲೂಕಿನ ರಾಜಕೀಯ ಇತಿಹಾಸದಲ್ಲಿ ಟಿ.ಸಿದ್ದದ್ದಲಿಂಗಯ್ಯ, ಮುಗವಾಳಪ್ಪ, ಕೊಂಗಾಡಿಯಪ್ಪ ರಂತ ಮಹನೀಯರು ದೊಡ್ಡಬಳ್ಳಾಪುರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಗಣ್ಯರು ಉತ್ತಮ ಆಡಳಿತ ನೀಡಿ ರಾಜಕೀಯ ಮಾಡಿದ್ದಾರೆ ಅವರ ಕಾಲಘಟ್ಟದಲ್ಲಿ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ಬೇರೆ ಕಡೆಯಿಂದ ವಲಸೆ‌ ಬಂದಿರುವವರು ತಾಲ್ಲೂಕಿನ ಇತಿಹಾಸ ಗೊತ್ತಿಲ್ಲದವರು, ಜನತೆಯ ಸ್ವಾಭಿಮಾನವನ್ನು ಹಾಳು ಮಾಡುತ್ತಿದ್ದಾರೆ, ಆಡಂಬರದ‌ ಬದುಕು ನಡೆಸಿ ಯುವಕರಿಗೆ ನಿತ್ಯ ಕ್ರೀಡಾಕೂಟ, ಔತಣಕೂಟ, ಓಂಶಕ್ತಿ , ಧರ್ಮಸ್ಥಳ ಯಾತ್ರೆಗಳಿಗೆ ಕಳಿಸಿ ಎಲ್ಲರನ್ನು ಭಿಕ್ಷುಕರನ್ನು ಮಾಡುತ್ತಿದ್ದಾರೆ ಎಂದು ಗುಡುಗಿದರು.

ಆಡಂಬರದ ಬದುಕು ನಿಲ್ಲಬೇಕು, ಈ ಆಡಂಬರಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದರ ಬಗ್ಗೆ ಅಧಿಕಾರಿಗಳು, ಪೊಲೀಸರು ನಿಗಾ ವಹಿಸಬೇಕು‌ ಎಂದು ಒತ್ತಾಯಿಸಿದರು.

ರಾಜಕಾರಣ ಮಾಡುವುದಾದರೇ ತಾತ್ವಿಕ, ಸಾಮಾಜಿಕ ಚಿಂತನೆ‌ಗಳಿಂದ ರಾಜಕಾರಣ ಮಾಡಬೇಕು ಅದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳುಮಾಡುವ, ಗೂಂಡಾವರ್ತನೆ ಪ್ರಭಾವ ಬೀರುವ, ಗೂಂಡಾ ಸಂಸ್ಕೃತಿ ರಾಜಕಾರಣ ಮಾಡಬಾರದು ಸಾಮಾಜಿಕ ಜವಾಬ್ಧಾರಿಗಳನ್ನು ಅರ್ಥ ಮಾಡಿಕೊಂಡು ರಾಜಕಾರಣ ಮಾಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಳಿದು ಹೋರಾಟದ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸರ ಕರ್ತವ್ಯ ಲೋಪಕ್ಕೆ ಎರಡು ಜೀವ ಬಲಿ:

ದೊಡ್ಡಬೆಳವಂಗಲದಲ್ಲಿ ಫೆಬ್ರವರಿ 17 ರಂದು ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದ ಬಗ್ಗೆ ಮಾಹಿತಿ ಪೊಲೀಸರ ಗಮನಕ್ಕೆ ಬಂದಾಗ ಕ್ರಮ ಕೈಗೊಂಡಿದಿದ್ದರೆ ಈ ಜೋಡಿ ಕೊಲೆಗಳು ಆಗುತ್ತಿರಲಿಲ್ಲ, ಸ್ವಲ್ಪ ಅಜಾಗರೂಕರಾಗಿದ್ದರಿಂದ ಎರಡು ಅಮಾಯಕ ಜೀವಗಳು ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾಳವ ನಾರಾಯಣ್, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ರಮೇಶ್, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಇದ್ದರು.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

6 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

7 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

20 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

20 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

23 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

23 hours ago