ದೊಡ್ಡಬೆಳವಂಗಲ ಜೋಡಿ ಕೊಲೆ ಪ್ರಕರಣ: ಘಟನೆಗೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ-ಮಾ.ಮುನಿರಾಜು

ತಾಲ್ಲೂಕಿನ ದೊಡ್ಡಬೆಳವಂಗಲ ಜೋಡಿ ಕೊಲೆಯಿಂದಾಗಿ ಶಾಂತಿಯುತವಾಗಿದ್ದ ತಾಲ್ಲೂಕಿನಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ ಎಂದು ದಲಿತ ವಿಮೋಚನಾ‌ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಅಭಿಪ್ರಾಯಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಿಂದೆಂದು ಕೇಳರಿಯದ ಘಟನೆಗಳು ತಾಲ್ಲೂಕಿನಲ್ಲಿ ಸಂಭವಿಸುತ್ತಿದೆ, ತಾಲ್ಲೂಕಿನ ರಾಜಕೀಯ ಇತಿಹಾಸದಲ್ಲಿ ಟಿ.ಸಿದ್ದದ್ದಲಿಂಗಯ್ಯ, ಮುಗವಾಳಪ್ಪ, ಕೊಂಗಾಡಿಯಪ್ಪ ರಂತ ಮಹನೀಯರು ದೊಡ್ಡಬಳ್ಳಾಪುರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಗಣ್ಯರು ಉತ್ತಮ ಆಡಳಿತ ನೀಡಿ ರಾಜಕೀಯ ಮಾಡಿದ್ದಾರೆ ಅವರ ಕಾಲಘಟ್ಟದಲ್ಲಿ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ಬೇರೆ ಕಡೆಯಿಂದ ವಲಸೆ‌ ಬಂದಿರುವವರು ತಾಲ್ಲೂಕಿನ ಇತಿಹಾಸ ಗೊತ್ತಿಲ್ಲದವರು, ಜನತೆಯ ಸ್ವಾಭಿಮಾನವನ್ನು ಹಾಳು ಮಾಡುತ್ತಿದ್ದಾರೆ, ಆಡಂಬರದ‌ ಬದುಕು ನಡೆಸಿ ಯುವಕರಿಗೆ ನಿತ್ಯ ಕ್ರೀಡಾಕೂಟ, ಔತಣಕೂಟ, ಓಂಶಕ್ತಿ , ಧರ್ಮಸ್ಥಳ ಯಾತ್ರೆಗಳಿಗೆ ಕಳಿಸಿ ಎಲ್ಲರನ್ನು ಭಿಕ್ಷುಕರನ್ನು ಮಾಡುತ್ತಿದ್ದಾರೆ ಎಂದು ಗುಡುಗಿದರು.

ಆಡಂಬರದ ಬದುಕು ನಿಲ್ಲಬೇಕು, ಈ ಆಡಂಬರಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದರ ಬಗ್ಗೆ ಅಧಿಕಾರಿಗಳು, ಪೊಲೀಸರು ನಿಗಾ ವಹಿಸಬೇಕು‌ ಎಂದು ಒತ್ತಾಯಿಸಿದರು.

ರಾಜಕಾರಣ ಮಾಡುವುದಾದರೇ ತಾತ್ವಿಕ, ಸಾಮಾಜಿಕ ಚಿಂತನೆ‌ಗಳಿಂದ ರಾಜಕಾರಣ ಮಾಡಬೇಕು ಅದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳುಮಾಡುವ, ಗೂಂಡಾವರ್ತನೆ ಪ್ರಭಾವ ಬೀರುವ, ಗೂಂಡಾ ಸಂಸ್ಕೃತಿ ರಾಜಕಾರಣ ಮಾಡಬಾರದು ಸಾಮಾಜಿಕ ಜವಾಬ್ಧಾರಿಗಳನ್ನು ಅರ್ಥ ಮಾಡಿಕೊಂಡು ರಾಜಕಾರಣ ಮಾಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಳಿದು ಹೋರಾಟದ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸರ ಕರ್ತವ್ಯ ಲೋಪಕ್ಕೆ ಎರಡು ಜೀವ ಬಲಿ:

ದೊಡ್ಡಬೆಳವಂಗಲದಲ್ಲಿ ಫೆಬ್ರವರಿ 17 ರಂದು ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದ ಬಗ್ಗೆ ಮಾಹಿತಿ ಪೊಲೀಸರ ಗಮನಕ್ಕೆ ಬಂದಾಗ ಕ್ರಮ ಕೈಗೊಂಡಿದಿದ್ದರೆ ಈ ಜೋಡಿ ಕೊಲೆಗಳು ಆಗುತ್ತಿರಲಿಲ್ಲ, ಸ್ವಲ್ಪ ಅಜಾಗರೂಕರಾಗಿದ್ದರಿಂದ ಎರಡು ಅಮಾಯಕ ಜೀವಗಳು ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾಳವ ನಾರಾಯಣ್, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ರಮೇಶ್, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಇದ್ದರು.

Ramesh Babu

Journalist

Recent Posts

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

44 minutes ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

2 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

9 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

10 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

11 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

21 hours ago