ದೊಡ್ಡಬೆಳವಂಗಲ ಜೋಡಿ ಕೊಲೆ ಪ್ರಕರಣ: ಘಟನೆಗೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ-ಮಾ.ಮುನಿರಾಜು

ತಾಲ್ಲೂಕಿನ ದೊಡ್ಡಬೆಳವಂಗಲ ಜೋಡಿ ಕೊಲೆಯಿಂದಾಗಿ ಶಾಂತಿಯುತವಾಗಿದ್ದ ತಾಲ್ಲೂಕಿನಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ ಎಂದು ದಲಿತ ವಿಮೋಚನಾ‌ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಅಭಿಪ್ರಾಯಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಿಂದೆಂದು ಕೇಳರಿಯದ ಘಟನೆಗಳು ತಾಲ್ಲೂಕಿನಲ್ಲಿ ಸಂಭವಿಸುತ್ತಿದೆ, ತಾಲ್ಲೂಕಿನ ರಾಜಕೀಯ ಇತಿಹಾಸದಲ್ಲಿ ಟಿ.ಸಿದ್ದದ್ದಲಿಂಗಯ್ಯ, ಮುಗವಾಳಪ್ಪ, ಕೊಂಗಾಡಿಯಪ್ಪ ರಂತ ಮಹನೀಯರು ದೊಡ್ಡಬಳ್ಳಾಪುರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಗಣ್ಯರು ಉತ್ತಮ ಆಡಳಿತ ನೀಡಿ ರಾಜಕೀಯ ಮಾಡಿದ್ದಾರೆ ಅವರ ಕಾಲಘಟ್ಟದಲ್ಲಿ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ಬೇರೆ ಕಡೆಯಿಂದ ವಲಸೆ‌ ಬಂದಿರುವವರು ತಾಲ್ಲೂಕಿನ ಇತಿಹಾಸ ಗೊತ್ತಿಲ್ಲದವರು, ಜನತೆಯ ಸ್ವಾಭಿಮಾನವನ್ನು ಹಾಳು ಮಾಡುತ್ತಿದ್ದಾರೆ, ಆಡಂಬರದ‌ ಬದುಕು ನಡೆಸಿ ಯುವಕರಿಗೆ ನಿತ್ಯ ಕ್ರೀಡಾಕೂಟ, ಔತಣಕೂಟ, ಓಂಶಕ್ತಿ , ಧರ್ಮಸ್ಥಳ ಯಾತ್ರೆಗಳಿಗೆ ಕಳಿಸಿ ಎಲ್ಲರನ್ನು ಭಿಕ್ಷುಕರನ್ನು ಮಾಡುತ್ತಿದ್ದಾರೆ ಎಂದು ಗುಡುಗಿದರು.

ಆಡಂಬರದ ಬದುಕು ನಿಲ್ಲಬೇಕು, ಈ ಆಡಂಬರಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದರ ಬಗ್ಗೆ ಅಧಿಕಾರಿಗಳು, ಪೊಲೀಸರು ನಿಗಾ ವಹಿಸಬೇಕು‌ ಎಂದು ಒತ್ತಾಯಿಸಿದರು.

ರಾಜಕಾರಣ ಮಾಡುವುದಾದರೇ ತಾತ್ವಿಕ, ಸಾಮಾಜಿಕ ಚಿಂತನೆ‌ಗಳಿಂದ ರಾಜಕಾರಣ ಮಾಡಬೇಕು ಅದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳುಮಾಡುವ, ಗೂಂಡಾವರ್ತನೆ ಪ್ರಭಾವ ಬೀರುವ, ಗೂಂಡಾ ಸಂಸ್ಕೃತಿ ರಾಜಕಾರಣ ಮಾಡಬಾರದು ಸಾಮಾಜಿಕ ಜವಾಬ್ಧಾರಿಗಳನ್ನು ಅರ್ಥ ಮಾಡಿಕೊಂಡು ರಾಜಕಾರಣ ಮಾಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಳಿದು ಹೋರಾಟದ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸರ ಕರ್ತವ್ಯ ಲೋಪಕ್ಕೆ ಎರಡು ಜೀವ ಬಲಿ:

ದೊಡ್ಡಬೆಳವಂಗಲದಲ್ಲಿ ಫೆಬ್ರವರಿ 17 ರಂದು ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದ ಬಗ್ಗೆ ಮಾಹಿತಿ ಪೊಲೀಸರ ಗಮನಕ್ಕೆ ಬಂದಾಗ ಕ್ರಮ ಕೈಗೊಂಡಿದಿದ್ದರೆ ಈ ಜೋಡಿ ಕೊಲೆಗಳು ಆಗುತ್ತಿರಲಿಲ್ಲ, ಸ್ವಲ್ಪ ಅಜಾಗರೂಕರಾಗಿದ್ದರಿಂದ ಎರಡು ಅಮಾಯಕ ಜೀವಗಳು ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾಳವ ನಾರಾಯಣ್, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ರಮೇಶ್, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಇದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

2 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

2 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

3 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

4 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

7 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

7 hours ago