ದೊಡ್ಡಬೆಳವಂಗಲ ಜೋಡಿ ಕೊಲೆ ಪ್ರಕರಣ: ಘಟನೆಗೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ-ಮಾ.ಮುನಿರಾಜು

ತಾಲ್ಲೂಕಿನ ದೊಡ್ಡಬೆಳವಂಗಲ ಜೋಡಿ ಕೊಲೆಯಿಂದಾಗಿ ಶಾಂತಿಯುತವಾಗಿದ್ದ ತಾಲ್ಲೂಕಿನಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ ಎಂದು ದಲಿತ ವಿಮೋಚನಾ‌ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಅಭಿಪ್ರಾಯಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಿಂದೆಂದು ಕೇಳರಿಯದ ಘಟನೆಗಳು ತಾಲ್ಲೂಕಿನಲ್ಲಿ ಸಂಭವಿಸುತ್ತಿದೆ, ತಾಲ್ಲೂಕಿನ ರಾಜಕೀಯ ಇತಿಹಾಸದಲ್ಲಿ ಟಿ.ಸಿದ್ದದ್ದಲಿಂಗಯ್ಯ, ಮುಗವಾಳಪ್ಪ, ಕೊಂಗಾಡಿಯಪ್ಪ ರಂತ ಮಹನೀಯರು ದೊಡ್ಡಬಳ್ಳಾಪುರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಗಣ್ಯರು ಉತ್ತಮ ಆಡಳಿತ ನೀಡಿ ರಾಜಕೀಯ ಮಾಡಿದ್ದಾರೆ ಅವರ ಕಾಲಘಟ್ಟದಲ್ಲಿ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ಬೇರೆ ಕಡೆಯಿಂದ ವಲಸೆ‌ ಬಂದಿರುವವರು ತಾಲ್ಲೂಕಿನ ಇತಿಹಾಸ ಗೊತ್ತಿಲ್ಲದವರು, ಜನತೆಯ ಸ್ವಾಭಿಮಾನವನ್ನು ಹಾಳು ಮಾಡುತ್ತಿದ್ದಾರೆ, ಆಡಂಬರದ‌ ಬದುಕು ನಡೆಸಿ ಯುವಕರಿಗೆ ನಿತ್ಯ ಕ್ರೀಡಾಕೂಟ, ಔತಣಕೂಟ, ಓಂಶಕ್ತಿ , ಧರ್ಮಸ್ಥಳ ಯಾತ್ರೆಗಳಿಗೆ ಕಳಿಸಿ ಎಲ್ಲರನ್ನು ಭಿಕ್ಷುಕರನ್ನು ಮಾಡುತ್ತಿದ್ದಾರೆ ಎಂದು ಗುಡುಗಿದರು.

ಆಡಂಬರದ ಬದುಕು ನಿಲ್ಲಬೇಕು, ಈ ಆಡಂಬರಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದರ ಬಗ್ಗೆ ಅಧಿಕಾರಿಗಳು, ಪೊಲೀಸರು ನಿಗಾ ವಹಿಸಬೇಕು‌ ಎಂದು ಒತ್ತಾಯಿಸಿದರು.

ರಾಜಕಾರಣ ಮಾಡುವುದಾದರೇ ತಾತ್ವಿಕ, ಸಾಮಾಜಿಕ ಚಿಂತನೆ‌ಗಳಿಂದ ರಾಜಕಾರಣ ಮಾಡಬೇಕು ಅದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳುಮಾಡುವ, ಗೂಂಡಾವರ್ತನೆ ಪ್ರಭಾವ ಬೀರುವ, ಗೂಂಡಾ ಸಂಸ್ಕೃತಿ ರಾಜಕಾರಣ ಮಾಡಬಾರದು ಸಾಮಾಜಿಕ ಜವಾಬ್ಧಾರಿಗಳನ್ನು ಅರ್ಥ ಮಾಡಿಕೊಂಡು ರಾಜಕಾರಣ ಮಾಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಳಿದು ಹೋರಾಟದ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸರ ಕರ್ತವ್ಯ ಲೋಪಕ್ಕೆ ಎರಡು ಜೀವ ಬಲಿ:

ದೊಡ್ಡಬೆಳವಂಗಲದಲ್ಲಿ ಫೆಬ್ರವರಿ 17 ರಂದು ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದ ಬಗ್ಗೆ ಮಾಹಿತಿ ಪೊಲೀಸರ ಗಮನಕ್ಕೆ ಬಂದಾಗ ಕ್ರಮ ಕೈಗೊಂಡಿದಿದ್ದರೆ ಈ ಜೋಡಿ ಕೊಲೆಗಳು ಆಗುತ್ತಿರಲಿಲ್ಲ, ಸ್ವಲ್ಪ ಅಜಾಗರೂಕರಾಗಿದ್ದರಿಂದ ಎರಡು ಅಮಾಯಕ ಜೀವಗಳು ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾಳವ ನಾರಾಯಣ್, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ರಮೇಶ್, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಇದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago