ದೊಡ್ಡಬೆಳವಂಗಲ ಜೋಡಿ ಕೊಲೆ ಪ್ರಕರಣ: ಘಟನೆಗೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ-ಮಾ.ಮುನಿರಾಜು

ತಾಲ್ಲೂಕಿನ ದೊಡ್ಡಬೆಳವಂಗಲ ಜೋಡಿ ಕೊಲೆಯಿಂದಾಗಿ ಶಾಂತಿಯುತವಾಗಿದ್ದ ತಾಲ್ಲೂಕಿನಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ ಎಂದು ದಲಿತ ವಿಮೋಚನಾ‌ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಅಭಿಪ್ರಾಯಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಿಂದೆಂದು ಕೇಳರಿಯದ ಘಟನೆಗಳು ತಾಲ್ಲೂಕಿನಲ್ಲಿ ಸಂಭವಿಸುತ್ತಿದೆ, ತಾಲ್ಲೂಕಿನ ರಾಜಕೀಯ ಇತಿಹಾಸದಲ್ಲಿ ಟಿ.ಸಿದ್ದದ್ದಲಿಂಗಯ್ಯ, ಮುಗವಾಳಪ್ಪ, ಕೊಂಗಾಡಿಯಪ್ಪ ರಂತ ಮಹನೀಯರು ದೊಡ್ಡಬಳ್ಳಾಪುರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಗಣ್ಯರು ಉತ್ತಮ ಆಡಳಿತ ನೀಡಿ ರಾಜಕೀಯ ಮಾಡಿದ್ದಾರೆ ಅವರ ಕಾಲಘಟ್ಟದಲ್ಲಿ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ಬೇರೆ ಕಡೆಯಿಂದ ವಲಸೆ‌ ಬಂದಿರುವವರು ತಾಲ್ಲೂಕಿನ ಇತಿಹಾಸ ಗೊತ್ತಿಲ್ಲದವರು, ಜನತೆಯ ಸ್ವಾಭಿಮಾನವನ್ನು ಹಾಳು ಮಾಡುತ್ತಿದ್ದಾರೆ, ಆಡಂಬರದ‌ ಬದುಕು ನಡೆಸಿ ಯುವಕರಿಗೆ ನಿತ್ಯ ಕ್ರೀಡಾಕೂಟ, ಔತಣಕೂಟ, ಓಂಶಕ್ತಿ , ಧರ್ಮಸ್ಥಳ ಯಾತ್ರೆಗಳಿಗೆ ಕಳಿಸಿ ಎಲ್ಲರನ್ನು ಭಿಕ್ಷುಕರನ್ನು ಮಾಡುತ್ತಿದ್ದಾರೆ ಎಂದು ಗುಡುಗಿದರು.

ಆಡಂಬರದ ಬದುಕು ನಿಲ್ಲಬೇಕು, ಈ ಆಡಂಬರಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದರ ಬಗ್ಗೆ ಅಧಿಕಾರಿಗಳು, ಪೊಲೀಸರು ನಿಗಾ ವಹಿಸಬೇಕು‌ ಎಂದು ಒತ್ತಾಯಿಸಿದರು.

ರಾಜಕಾರಣ ಮಾಡುವುದಾದರೇ ತಾತ್ವಿಕ, ಸಾಮಾಜಿಕ ಚಿಂತನೆ‌ಗಳಿಂದ ರಾಜಕಾರಣ ಮಾಡಬೇಕು ಅದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳುಮಾಡುವ, ಗೂಂಡಾವರ್ತನೆ ಪ್ರಭಾವ ಬೀರುವ, ಗೂಂಡಾ ಸಂಸ್ಕೃತಿ ರಾಜಕಾರಣ ಮಾಡಬಾರದು ಸಾಮಾಜಿಕ ಜವಾಬ್ಧಾರಿಗಳನ್ನು ಅರ್ಥ ಮಾಡಿಕೊಂಡು ರಾಜಕಾರಣ ಮಾಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಳಿದು ಹೋರಾಟದ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸರ ಕರ್ತವ್ಯ ಲೋಪಕ್ಕೆ ಎರಡು ಜೀವ ಬಲಿ:

ದೊಡ್ಡಬೆಳವಂಗಲದಲ್ಲಿ ಫೆಬ್ರವರಿ 17 ರಂದು ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದ ಬಗ್ಗೆ ಮಾಹಿತಿ ಪೊಲೀಸರ ಗಮನಕ್ಕೆ ಬಂದಾಗ ಕ್ರಮ ಕೈಗೊಂಡಿದಿದ್ದರೆ ಈ ಜೋಡಿ ಕೊಲೆಗಳು ಆಗುತ್ತಿರಲಿಲ್ಲ, ಸ್ವಲ್ಪ ಅಜಾಗರೂಕರಾಗಿದ್ದರಿಂದ ಎರಡು ಅಮಾಯಕ ಜೀವಗಳು ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾಳವ ನಾರಾಯಣ್, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ರಮೇಶ್, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಇದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

6 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

10 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

17 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

18 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago