ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಾದ ಕಳ್ಳತನ ಪ್ರಕರಣ: ಆನೆ ಲಿಂಗೇಶ್ವರ ದೇವಸ್ಥಾನದ ಹುಂಡಿಗೆ ಕನ್ನ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿನ ಆನೆ ಲಿಂಗೇಶ್ವರ ದೇವಸ್ಥಾನದ ಹುಂಡಿಗೆ ಕನ್ನ ಹಾಕಿರುವ ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಬೆಳಗ್ಗೆ ಭಕ್ತರೊಬ್ಬರು ದೇವರ ದರ್ಶನಕ್ಕೆಂದು ಹೋದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಹುಂಡಿ ಹೊಡೆದಿರುವ ಕಳ್ಳರು ಸುಮಾರು 1 ಲಕ್ಷಕ್ಕೂ ಹೆಚ್ಚು ಹಣವನ್ನ ದೋಚಿರುವುದಾಗಿ ಸ್ಥಳೀಯರು ಹೇಳಿದ್ದಾರೆ.

ಇತ್ತೀಚೆಗೆ ಆನೆ ಲಿಂಗೇಶ್ವರ ದೇವಸ್ಥಾನದ ಜಾತ್ರೆ ಮಹೋತ್ಸವ ನಡೆದಿದ್ದು, ಭಕ್ತರ ಕಾಣಿಕೆ ಹಣ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿದೆ ಎಂಬ ಮಾಹಿತಿ ಹಿನ್ನೆಲೆ ಕಳ್ಳರು ಕೃತ್ಯ ಎಸೆಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅದೇ ರೀತಿ ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಹಗಲಿನಲ್ಲಿ ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡಿಕೊಂಡು ಹೋಗಿರುವ ಪ್ರಕರಣಗಳು ಹೆಚ್ಚಾಗಿ ದಾಖಲಾಗಿದ್ದು, ಈ ಹಿನ್ನೆಲೆ ಕಳ್ಳತನ ಪ್ರಕರಣಗಳು ಉಂಟಾಗದಂತೆ ಜನರಿಗೆ ತಿಳುವಳಿಕೆ ನೀಡಲು ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಿ ಪರಿಶೀಲನೆ ನಡೆಸಲಾಗುತ್ತಿದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

7 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

12 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

13 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

16 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago