ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ- ಮಕ್ಕಳಿಗೆ ಪೊಲೀಸ್ ಇಲಾಖೆ ಬಗ್ಗೆ ಪಾಠ ಮಾಡಿದ ಇನ್ಸ್ಪೆಕ್ಟರ್ ನವೀನ್ ಕುಮಾರ್

ಪೊಲೀಸ್ ಠಾಣೆ, ಪೊಲೀಸ್ ಎಂದರೆ ಮಕ್ಕಳು ಸಾಮಾನ್ಯವಾಗಿ ಭಯಪಡುವುದು ಸರ್ವೇಸಾಮಾನ್ಯ. ಈ ಭಯವನ್ನು ಹೋಗಲಾಡಿಸಿ, ಮಕ್ಕಳು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ಮತ್ತು ರಕ್ಷಣೆ ಬೇಕೆಂದೆನಿಸಿದಾಗ ಪೊಲೀಸ್‌ ಸಹಾಯ ಪಡೆಯಲು ಮಕ್ಕಳ ಸ್ನೇಹಿ ವಾತಾವರಣ ಸೃಷ್ಟಿ ಮಾಡಲು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗಾಗಿ ‘ತೆರೆದ ಮನೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾನೂನು ಮತ್ತು ಸುವ್ಯವಸ್ಥೆ, ಲೈಂಗಿಕ ದೌರ್ಜನ್ಯ ತಡೆಯುವುದು, ಬಾಲ್ಯ ವಿವಾಹ ನಿರ್ಮೂಲನೆ, ಕಿರುಕುಳ, ಬಾಲಕಾರ್ಮಿಕತೆಯ ನಿರ್ಮೂಲನೆ, ಅತ್ಯಾಚಾರ, ಕಿಡ್ನ್ಯಾಪ್,  ಸರಗಳತನ, ಜೇಬುಗಳ್ಳತನದ ಬಗ್ಗೆ ಎಚ್ಚರಿಕೆ, ಸೈಬರ್ ಅಪರಾಧಗಳ ಬಗ್ಗೆ ಮುನ್ನೆಚ್ಚರಿಕೆ, ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಅದೇರೀತಿ ತಪ್ಪಿತಸ್ಥರ ಮೇಲೆ ಕಾನೂನು ಯಾವ ರೀತಿ ಕ್ರಮ‌ ಕೈಗೊಳ್ಳುತ್ತದೆ. ಪೊಲೀಸ್ ಇಲಾಖೆಯ ಕರ್ತವ್ಯ, ಜವಾಬ್ದಾರಿ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಮಕ್ಕಳಿಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಅವರು ತಿಳಿಸಿಕೊಟ್ಟರು.

ಕಳ್ಳರಿಗೆ ಬೇಡಿ ಏಕೆ ಹಾಕುತ್ತಾರೆ..? ಮಕ್ಕಳು ತಪ್ಪು ಮಾಡಿದರೆ ಶಿಕ್ಷೆ ನೀಡುವುದಿಲ್ಲವೇ..? ಕಳ್ಳರನ್ನು ಹಿಡಿದು ಏನು ಮಾಡುತ್ತೀರಾ..? ಆರೋಪಿಗಳನ್ನು ಹೇಗೆ ಪತ್ತೆ ಹಚ್ಚುತ್ತೀರಾ..? ಹೀಗೆ ಕುತೂಹಲದ ಪ್ರಶ್ನೆಗಳನ್ನು ಠಾಣಾಧಿಕಾರಿಗೆ ಕೇಳಿ ಗೊಂದಲ ನಿವಾರಿಸಿಕೊಂಡರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago