ದೊಡ್ಡಬೆಳವಂಗಲ ಪೊಲೀಸ್ ಠಾಣೆ ಎಎಸ್ಐ ಕೃಷ್ಣ ಸಿ.ಎನ್‌ಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಹಾಗೂ ದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ಪ್ರಕಟ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಎಎಸ್‌ಐ ಕೃಷ್ಣ ಸಿ.ಎನ್ ಅವರು 2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತಂದೆ ನಂಜಪ್ಪ ಗೌಡ, ತಾಯಿ ಲಕ್ಷ್ಮಮ್ಮ ಅವರ ಮಗನಾದ ಇವರು ಕಳೆದ 29 ವರ್ಷದಿಂದ ಪೊಲೀಸ್ ಇಲಾಖೆಯ ವಿವಿಧ ಠಾಣೆಗಳಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ದರೋಡೆ, ಕೊಲೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ತನಿಖಾಧಿಕಾರಿ ಸೇವೆ ಸಲ್ಲಿಸಿದ್ದಾರೆ. ಇಲಾಖೆಯಲ್ಲಿ ‘ತನಿಖಾಧಿಕಾರಿ’ ಎಂದೇ ಖ್ಯಾತಿ ಪಡೆದಿದ್ದಾರೆ.

ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಠಾಣೆಯಲ್ಲಿ ಕಳೆದ 3 ವರ್ಷಗಳಿಂದ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತಂಡದಲ್ಲಿ ತನಿಖಾ ಅಧಿಕಾರಿಯಾಗಿಯೂ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ.

ದಕ್ಷ ಅಧಿಕಾರಿಯಾಗಿರುವ ಇವರು ಸಾಕಷ್ಟು ಪ್ರಕರಣಗಳ ತನಿಖೆಯಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ‌ ಎನ್ನಲಾಗಿದೆ. ತನಿಖೆ ಪ್ರಕರಣಗಳಲ್ಲಿನ ಸೇವೆಯನ್ನು ಗುರುತಿಸಿ ಇದೀಗ ಸಿಎಂ ಪ್ರಶಸ್ತಿಯನ್ನು ನೀಡಲಾಗಿದೆ.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

3 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

4 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

8 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

15 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

16 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago