ದೊಡ್ಡಬೆಳವಂಗಲ ಪೊಲೀಸ್ ಠಾಣೆ ಎಎಸ್ಐ ಕೃಷ್ಣ ಸಿ.ಎನ್‌ಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಹಾಗೂ ದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ಪ್ರಕಟ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಎಎಸ್‌ಐ ಕೃಷ್ಣ ಸಿ.ಎನ್ ಅವರು 2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತಂದೆ ನಂಜಪ್ಪ ಗೌಡ, ತಾಯಿ ಲಕ್ಷ್ಮಮ್ಮ ಅವರ ಮಗನಾದ ಇವರು ಕಳೆದ 29 ವರ್ಷದಿಂದ ಪೊಲೀಸ್ ಇಲಾಖೆಯ ವಿವಿಧ ಠಾಣೆಗಳಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ದರೋಡೆ, ಕೊಲೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ತನಿಖಾಧಿಕಾರಿ ಸೇವೆ ಸಲ್ಲಿಸಿದ್ದಾರೆ. ಇಲಾಖೆಯಲ್ಲಿ ‘ತನಿಖಾಧಿಕಾರಿ’ ಎಂದೇ ಖ್ಯಾತಿ ಪಡೆದಿದ್ದಾರೆ.

ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಠಾಣೆಯಲ್ಲಿ ಕಳೆದ 3 ವರ್ಷಗಳಿಂದ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತಂಡದಲ್ಲಿ ತನಿಖಾ ಅಧಿಕಾರಿಯಾಗಿಯೂ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ.

ದಕ್ಷ ಅಧಿಕಾರಿಯಾಗಿರುವ ಇವರು ಸಾಕಷ್ಟು ಪ್ರಕರಣಗಳ ತನಿಖೆಯಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ‌ ಎನ್ನಲಾಗಿದೆ. ತನಿಖೆ ಪ್ರಕರಣಗಳಲ್ಲಿನ ಸೇವೆಯನ್ನು ಗುರುತಿಸಿ ಇದೀಗ ಸಿಎಂ ಪ್ರಶಸ್ತಿಯನ್ನು ನೀಡಲಾಗಿದೆ.

Ramesh Babu

Journalist

Recent Posts

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

11 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

20 hours ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು….

ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…

2 days ago

ಬೆಂ.ಗ್ರಾ ಜಿ.ಪಂ ನೂತನ ಸಿ.ಇ.ಒ ಡಾ.ವಸಂತಿ ಅಮರ್ ಬಿ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

3 days ago