ದೊಡ್ಡಬೆಳವಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಹಳೇ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಸಲಾಯಿತು.

2006 -2007ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 18 ವರ್ಷಗಳ ಬಳಿಕ ತಾವು ಓದಿದ ಶಾಲೆಯಲ್ಲಿ ಸೇರಿ ತಮ್ಮ ಶಿಕ್ಷಕರಿಗೆ ಗೌರವವನ್ನ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ಗುರುಗಳಿಗೆ ಸಕಲ ಗೌರವಗಳನ್ನು ಸಲ್ಲಿಸುತ್ತ ಗುರುಗಳ ಪಾದಪೂಜೆ ಮಾಡಿ, ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆತರಲಾಯಿತು.

ಇನ್ನು ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಳೇ ವಿದ್ಯಾರ್ಥಿಗಳು ಒಂದೇ ಕಡೆ  ಸೇರಿರುವದರಿಂದ ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ…

ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸಿದ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು.

ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ, ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ. ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದು ಶಿಕ್ಷಕರು ಹೇಳಿದರು.

ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿದ್ಯಾರ್ಥಿಗಳಲ್ಲಿ ಇದೆ. ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ. ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ. ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

2006 -2007ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago