ದೊಡ್ಡಬೆಳವಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಹಳೇ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಸಲಾಯಿತು.

2006 -2007ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 18 ವರ್ಷಗಳ ಬಳಿಕ ತಾವು ಓದಿದ ಶಾಲೆಯಲ್ಲಿ ಸೇರಿ ತಮ್ಮ ಶಿಕ್ಷಕರಿಗೆ ಗೌರವವನ್ನ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ಗುರುಗಳಿಗೆ ಸಕಲ ಗೌರವಗಳನ್ನು ಸಲ್ಲಿಸುತ್ತ ಗುರುಗಳ ಪಾದಪೂಜೆ ಮಾಡಿ, ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆತರಲಾಯಿತು.

ಇನ್ನು ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಳೇ ವಿದ್ಯಾರ್ಥಿಗಳು ಒಂದೇ ಕಡೆ  ಸೇರಿರುವದರಿಂದ ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ…

ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸಿದ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು.

ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ, ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ. ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದು ಶಿಕ್ಷಕರು ಹೇಳಿದರು.

ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿದ್ಯಾರ್ಥಿಗಳಲ್ಲಿ ಇದೆ. ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ. ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ. ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

2006 -2007ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

7 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

9 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago