ದೊಡ್ಡಬೆಳವಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಹಳೇ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಸಲಾಯಿತು.

2006 -2007ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 18 ವರ್ಷಗಳ ಬಳಿಕ ತಾವು ಓದಿದ ಶಾಲೆಯಲ್ಲಿ ಸೇರಿ ತಮ್ಮ ಶಿಕ್ಷಕರಿಗೆ ಗೌರವವನ್ನ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ಗುರುಗಳಿಗೆ ಸಕಲ ಗೌರವಗಳನ್ನು ಸಲ್ಲಿಸುತ್ತ ಗುರುಗಳ ಪಾದಪೂಜೆ ಮಾಡಿ, ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆತರಲಾಯಿತು.

ಇನ್ನು ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಳೇ ವಿದ್ಯಾರ್ಥಿಗಳು ಒಂದೇ ಕಡೆ  ಸೇರಿರುವದರಿಂದ ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ…

ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸಿದ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು.

ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ, ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ. ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದು ಶಿಕ್ಷಕರು ಹೇಳಿದರು.

ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿದ್ಯಾರ್ಥಿಗಳಲ್ಲಿ ಇದೆ. ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ. ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ. ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

2006 -2007ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 hour ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 hour ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

12 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

14 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

15 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

16 hours ago