ದೊಡ್ಡಬೆಳವಂಗಲ ಹೋಬಳಿಯ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಭೂಸ್ವಾಧೀನ ವಿಚಾರ: ಭೂಸ್ವಾಧೀನಕ್ಕೆ ವಿರೋಧಿಸಿ ಅ.28ಕ್ಕೆ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ

 

ದೊಡ್ಡಬೆಳವಂಗಲ ಹೋಬಳಿಯ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿಯು ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು. ಇಲ್ಲಿನ ರೈತರು ಪ್ರಾಣ ಕೊಟ್ಟೇವು ಭೂಮಿ ನೀಡೆವು ಎನ್ನುವ ಘೋಷದೊಂದಿಗೆ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಅ.28 ರಂದು ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗೃಹ ಮಂಡಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಉಗ್ರಪ್ಪ , ಕಾರ್ಯಾಧ್ಯಕ್ಷ ಸಿ.ಎಚ್‌.ರಾಮಕೃಷ್ಣಯ್ಯ ತಿಳಿಸಿದ್ದಾರೆ.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬೆಳವಂಗಳ ಹೋಬಳಿಯ ಕಸಾಘಟ್ಟ ದೊಡ್ಡಹೆಜ್ಜಾಜಿ, ವೆಂಕಟೇಶಪುರ, ಕಾರೇಪುರ, ಐಯ್ಯನಹಳ್ಳಿ ಗ್ರಾಮಗಳ 2,760 ಎಕರೆ ಫಲವತ್ತಾದ ಕೃಷಿ ಭೂಸ್ವಾಧೀನಕ್ಕೆ ಕರ್ನಾಟಕ ರಾಜ್ಯ ಗೃಹ ಮಂಡಳಿ ಮುಂದಾಗಿದೆ. ತಾಲ್ಲೂಕಿನಲ್ಲೇ ಅತ್ಯಂತ ಹೆಚ್ಚು ಕೃಷಿ ಚಟುವಟಿಕೆಗಳು ನಡೆಯುತ್ತಿರುವ ಫಲವತ್ತಾದ ಜಮೀನುಗಳು ಇರುವ ಸ್ಥಳದಲ್ಲಿ ಗೃಹ ಮಂಡಳಿ ಭೂಸ್ವಾಧಿನಕ್ಕೆ ಮುಂದಾಗಿರುವುದು ಅತ್ಯಂತ ಅವೈಜ್ಞಾನಿಕ ಕ್ರಮವಾಗಿದೆ. ಈಗಾಗಲೇ ದೊಡ್ಡಬೆಳವಂಗಲ ಹೋಬಳಿಯಲ್ಲಿ ಕ್ವಿನ್ ಸಿಟಿಗೆ 5100 ಎಕರೆ, ಹೈಟೆಕ್ ಲಾಜಿಸ್ಟಿಕ್ ಪಾರ್ಕ್, ಬಿಬಿಎಂಪಿ ಕಸವಿಲೇವಾರಿ ಘಟಕ ಸೇರಿದಂತೆ ಹತ್ತಾರು ಯೋಜನೆಗಳ ನೆಪದಲ್ಲಿ ಸಾವಿರಾರು ಎಕರೆ ರೈತರ ಫಲವತ್ತಾದ ಕೃಷಿ ಜಮೀನನ್ನು ಸ್ವಾಧಿನಪಡಿಸಿಕೊಳ್ಳಲಾಗುತ್ತಿದೆ. ಕೃಷಿ ಭೂಮಿಯನ್ನು ಕೈಗಾರಿಕೆಗಳಿಗೆ ನೀಡಿದರೆ ರೈತರು ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

ಸರ್ಕಾರ ಕೈಗಾರಿಕೆಗಳ ಸ್ಥಾಪನೆ ನೆಪದಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದೆ. ಕೃಷಿ ಜಮೀನು ಸ್ವಾಧೀನಕ್ಕೂ ಒಂದು ಮಿತಿ ಇರಬೇಕು. ಈ ಪ್ರದೇಶ ಎಲ್ಲದಕ್ಕೂ ಬೆಂಗಳೂರಿಗೆ ಸಮೀಪವಾಗಿ ಕೇಂದ್ರವಾಗಿರುವುದರಿಂದ ಎಲ್ಲಾ ಯೋಜನೆಗಳನ್ನು ದೊಡ್ಡಬೆಳವಂಗಲ ಹೋಬಳಿಯಲ್ಲೇ ಜಾರಿಗೊಳಿಸಲಾಗುತ್ತಿದೆ. ಬದಲಿಗೆ ರಾಜ್ಯ ಇತರೆ ಜಿಲ್ಲೆಗಳಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಎಂದರು.

ಪ್ರಾಂತ ರೈತ ಸಂಘದ ರಾಜ್ಯ ಸಂಚಾಲಕರಾದ ಪ್ರಭಾ ಬೆಳವಂಗಲ ಮಾತನಾಡಿ, ಗೃಹ ಮಂಡಳಿ ವಸತಿ ನಿರ್ಮಾಣ ನೆಪದಲ್ಲಿ ಸಾವಿರಾರು ಎಕರೆ ಕೃಷಿ ಜಮೀನು ಕಬಳಿಸಲು ಮುಂದಾಗಿರುವುದು ಖಂಡನೀಯ. ದೊಡ್ಡಬೆಳವಂಗಲ ಹೋಬಳಿಯ ರೈತರನ್ನು ಸಂಪೂರ್ಣವಾಗಿ ಒಕ್ಕಲೆಬ್ಬಿಸುವ ವ್ಯವಸ್ಥಿತಿ ಸಂಚು ನಡೆಯುತ್ತಿದೆ. ರೈತರ ಜಮೀನು ಪಡೆಯುವ ಸರ್ಕಾರಗಳು ರೈತರ ಹಿತದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕೃಷಿ ಭೂಮಿ ಹೋದರೆ ಆಹಾರಕ್ಕೆ ಹಾಹಾಕಾರವಾಗುತ್ತದೆ. ಇಲ್ಲಿನ ಮಕ್ಕಳ ಶಿಕ್ಷಣ ಹಾಗೂ ಅಭಿವೃದ್ದಿ ಹೇಗೆ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.ಈಗಾಗಲೇ ಭೂಸ್ವಾಧೀನ ಮಾಡಿ ಸ್ಥಾಪಿಸಿರುವ ಕೈಗಾರಿಕೆಗಳಲ್ಲಿ ಎಷ್ಟು ಆಭಿವೃದ್ದಿಯಾಗಿದೆ. ಇಲ್ಲಿನ ಜನರಿಗೆ ಸಿಕ್ಕ ಪ್ರತಿಫಲವೆಷ್ಟು ಎನ್ನುವುದನ್ನು ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದರು.

ಅ.28 ರಂದು ಬೃಹತ್ ಪ್ರತಿಭಟನೆ :

ಕರ್ನಾಟಕ ರಾಜ್ಯ ಗೃಹ ಮಂಡಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಅ.28 ರಂದು ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ನಗರದ ನೆಲದಾಂಜಸ್ವಾಮಿ ದೇವಾಲಯದ ಬಳಿಯಿಂದ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖಂಡರು ತಿಳಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಗೃಹ ಮಂಡಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಗೌ. ಅಧ್ಯಕ್ಷ ಸಿ.ರಾಮಕೃಷ್ಣಯ್ಯ, ಕಾರ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಡಿ.ಎ.ಸತೀಶ್‌, ಖಜಾಂಚಿ ಸಿ.ರಾಮೇಗೌಡ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ರುದ್ರಾರಾಧ್ಯ, ಸಿಐಟಿಯು ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ಕನ್ನಡ ಪಕ್ಷದ ಮುಖಂಡ ಸಂಜೀವ್‌ ನಾಯಕ್‌ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

3 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

11 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

21 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

23 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago