Categories: ಕೊಡಗು

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ್ದಾನೆ. ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದು
ಕಾರಾಗೃಹ ಸೇರಿದ್ದಾನೆ. ದೇವರಪುರ, ತಿತಿಮತಿ ಗ್ರಾಮದ ಪಂಜಿರ ಎರವರ ರವಿ (42) ಎಂಬತಾನೇ ತನ್ನ ಕ್ರೂರ ಕ್ರೌರ್ಯಕ್ಕಾಗಿ ಜೈಲು ಪಾಲಾಗಿರುವ ಆರೋಪಿ ಆಗಿದ್ದಾನೆ.

ಪೊಲೀಸರು ಸಕಾಲಿಕವಾಗಿ ನೆರವಿಗೆ ಧಾವಿಸಿ, ಈತನ ಹೀನ ಕೃತ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 11-07-2025 ರಂದು ಸುಮಾರು 5 ವರ್ಷದ ಒಂದು ಹೆಣ್ಣು ಮಗು ಮೈ ಕೈ ಗಾಯಗೊಂಡು ಬಿಳಿಗೆರೆ ಸಮೀಪ ಒಂಟಿಯಾಗಿ ನಿಂತಿದ್ದಳು. ಈ ಬಗ್ಗೆ ತುರ್ತು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಸ್ವೀಕರಿಸಿದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ದಿನಾಂಕ 14-07-2025 ರಂದು ಮಡಿಕೇರಿಯ ಸರ್ಕಾರಿ “ಮಡಿಲು” ಕೇಂದ್ರಕ್ಕೆ ಸೇರಿಸಿದ್ದಾರೆ.

*ಐದು ವರ್ಷದ ಮಗುವಿನ ಮೈ ಕೈ ಸುಟ್ಟು ತೋಡಿಗೆ ತಳ್ಳಿದ್ದ*

ಪೊಲೀಸರು ದಿನಾಂಕ 14-07-2025 ರಂದು ಈ ಮಗುವಿನ ತಾಯಿ ಪಣಿ ಎರವರ ಭಾಗ್ಯರವರನ್ನು ಪತ್ತೆ ಮಾಡಿ ತನ್ನ ಮಗಳ ಭೇಟಿ ಮಾಡಿಸಿದ್ದಾರೆ. ಮಗುವಿನ ಮೂಗು, ಹಣೆ ಎರಡೂ ಮೈ, ಕೈ ಮತ್ತು ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿದುದ್ದು ಕಂಡು ಬಂದಿದೆ. ಮಗಳನ್ನು ವಿಚಾರಿಸಿದಾಗ, ತಂದೆ ರವಿ ಬೆಂಕಿಯಿಂದ ಸುಟ್ಟು, ದೊಣ್ಣೆಯಿಂದ ಹೊಡೆದು “ನಿನ್ನನ್ನು ಸಾಯಿಸುತ್ತೇನೆ” ಎಂದು ಹೇಳಿ ನೀರಿನ ತೋಡಿಗೆ ತಳ್ಳಿ ಹೋಗಿದ್ದು, ನಂತರ ತೋಡಿನಿಂದ ಎದ್ದು ರಸ್ತೆಯಲ್ಲಿ ನಿಂತಿದ್ದಾಗ ನನ್ನನ್ನು ಪೊಲೀಸರು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಮಾಡಿಸಿರುತ್ತಾರೆ ಎಂದು ತಿಳಿಸಿದ್ದಾಳೆ.

ಹೀಗಾಗಿ ಮಗುವಿನ ಕೈ ಮೈ ಬೆಂಕಿಯಿಂದ ಸುಟ್ಟು ಹಾಗೂ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿರುವ ಪಂಜರಿ ಎರವರ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸ್ವೀಕರಿಸಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 115(2), 118(1), 109 BNS ಕಾಯ್ದೆ 2023 ಮತ್ತು 75 ಜೆ.ಜೆ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

*ಮತ್ತೊಬ್ಬಳನ್ನು ದೊಣ್ಣಯಿಂದ ಥಳಿಸಿ ಕೊಂದಿದ್ದ*

ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ನಿವಾಸಿ ಕಳ್ಳಿಯಪ್ಪಂಡ ಸೋಮಯ್ಯರವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಭಾಗ್ಯರವರ ಎರಡನೇ ಗಂಡನಾದ ಆರೋಪಿ ಪಣಿ ಎರವರ ರವಿ, ಮಂಚಳ್ಳಿ ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದಾಗ ಒಂದು ತಿಂಗಳ ಹಿಂದೆ ಭಾಗ್ಯಳ ಮೊದಲನೇ ಗಂಡನ ಮತ್ತೊಬ್ಬಳು ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾದ ಹಿನ್ನೆಲೆ, ಕುಟ್ಟ ಪೊಲೀಸ್ ಠಾಣೆಯಲ್ಲಿ ಕಲಂ 103(1), 238(ಎ) BNS ಕಾಯ್ದೆ 2023ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಎರಡು ಪ್ರಕರಣಗಳ ತನಿಖೆಗಾಗಿ ವಿರಾಜಪೇಟೆ ಉಪ ವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ಮಡಿಕೇರಿ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರ, ಮಡಿಕೇರಿ ಮತ್ತು ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 19-07-2025 ರಂದು ದೇವರಪುರ ತಿತಿಮತಿ ನಿವಾಸಿ ಆರೋಪಿ ಪಂಜರಿ ಎರವರ ರವಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

4 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

4 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

4 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

5 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

8 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

11 hours ago