Categories: ಕೊಡಗು

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ್ದಾನೆ. ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದು
ಕಾರಾಗೃಹ ಸೇರಿದ್ದಾನೆ. ದೇವರಪುರ, ತಿತಿಮತಿ ಗ್ರಾಮದ ಪಂಜಿರ ಎರವರ ರವಿ (42) ಎಂಬತಾನೇ ತನ್ನ ಕ್ರೂರ ಕ್ರೌರ್ಯಕ್ಕಾಗಿ ಜೈಲು ಪಾಲಾಗಿರುವ ಆರೋಪಿ ಆಗಿದ್ದಾನೆ.

ಪೊಲೀಸರು ಸಕಾಲಿಕವಾಗಿ ನೆರವಿಗೆ ಧಾವಿಸಿ, ಈತನ ಹೀನ ಕೃತ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 11-07-2025 ರಂದು ಸುಮಾರು 5 ವರ್ಷದ ಒಂದು ಹೆಣ್ಣು ಮಗು ಮೈ ಕೈ ಗಾಯಗೊಂಡು ಬಿಳಿಗೆರೆ ಸಮೀಪ ಒಂಟಿಯಾಗಿ ನಿಂತಿದ್ದಳು. ಈ ಬಗ್ಗೆ ತುರ್ತು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಸ್ವೀಕರಿಸಿದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ದಿನಾಂಕ 14-07-2025 ರಂದು ಮಡಿಕೇರಿಯ ಸರ್ಕಾರಿ “ಮಡಿಲು” ಕೇಂದ್ರಕ್ಕೆ ಸೇರಿಸಿದ್ದಾರೆ.

*ಐದು ವರ್ಷದ ಮಗುವಿನ ಮೈ ಕೈ ಸುಟ್ಟು ತೋಡಿಗೆ ತಳ್ಳಿದ್ದ*

ಪೊಲೀಸರು ದಿನಾಂಕ 14-07-2025 ರಂದು ಈ ಮಗುವಿನ ತಾಯಿ ಪಣಿ ಎರವರ ಭಾಗ್ಯರವರನ್ನು ಪತ್ತೆ ಮಾಡಿ ತನ್ನ ಮಗಳ ಭೇಟಿ ಮಾಡಿಸಿದ್ದಾರೆ. ಮಗುವಿನ ಮೂಗು, ಹಣೆ ಎರಡೂ ಮೈ, ಕೈ ಮತ್ತು ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿದುದ್ದು ಕಂಡು ಬಂದಿದೆ. ಮಗಳನ್ನು ವಿಚಾರಿಸಿದಾಗ, ತಂದೆ ರವಿ ಬೆಂಕಿಯಿಂದ ಸುಟ್ಟು, ದೊಣ್ಣೆಯಿಂದ ಹೊಡೆದು “ನಿನ್ನನ್ನು ಸಾಯಿಸುತ್ತೇನೆ” ಎಂದು ಹೇಳಿ ನೀರಿನ ತೋಡಿಗೆ ತಳ್ಳಿ ಹೋಗಿದ್ದು, ನಂತರ ತೋಡಿನಿಂದ ಎದ್ದು ರಸ್ತೆಯಲ್ಲಿ ನಿಂತಿದ್ದಾಗ ನನ್ನನ್ನು ಪೊಲೀಸರು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಮಾಡಿಸಿರುತ್ತಾರೆ ಎಂದು ತಿಳಿಸಿದ್ದಾಳೆ.

ಹೀಗಾಗಿ ಮಗುವಿನ ಕೈ ಮೈ ಬೆಂಕಿಯಿಂದ ಸುಟ್ಟು ಹಾಗೂ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿರುವ ಪಂಜರಿ ಎರವರ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸ್ವೀಕರಿಸಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 115(2), 118(1), 109 BNS ಕಾಯ್ದೆ 2023 ಮತ್ತು 75 ಜೆ.ಜೆ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

*ಮತ್ತೊಬ್ಬಳನ್ನು ದೊಣ್ಣಯಿಂದ ಥಳಿಸಿ ಕೊಂದಿದ್ದ*

ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ನಿವಾಸಿ ಕಳ್ಳಿಯಪ್ಪಂಡ ಸೋಮಯ್ಯರವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಭಾಗ್ಯರವರ ಎರಡನೇ ಗಂಡನಾದ ಆರೋಪಿ ಪಣಿ ಎರವರ ರವಿ, ಮಂಚಳ್ಳಿ ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದಾಗ ಒಂದು ತಿಂಗಳ ಹಿಂದೆ ಭಾಗ್ಯಳ ಮೊದಲನೇ ಗಂಡನ ಮತ್ತೊಬ್ಬಳು ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾದ ಹಿನ್ನೆಲೆ, ಕುಟ್ಟ ಪೊಲೀಸ್ ಠಾಣೆಯಲ್ಲಿ ಕಲಂ 103(1), 238(ಎ) BNS ಕಾಯ್ದೆ 2023ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಎರಡು ಪ್ರಕರಣಗಳ ತನಿಖೆಗಾಗಿ ವಿರಾಜಪೇಟೆ ಉಪ ವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ಮಡಿಕೇರಿ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರ, ಮಡಿಕೇರಿ ಮತ್ತು ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 19-07-2025 ರಂದು ದೇವರಪುರ ತಿತಿಮತಿ ನಿವಾಸಿ ಆರೋಪಿ ಪಂಜರಿ ಎರವರ ರವಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

6 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

8 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

10 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

11 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

18 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

18 hours ago