Categories: ಕೊಡಗು

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ್ದಾನೆ. ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದು
ಕಾರಾಗೃಹ ಸೇರಿದ್ದಾನೆ. ದೇವರಪುರ, ತಿತಿಮತಿ ಗ್ರಾಮದ ಪಂಜಿರ ಎರವರ ರವಿ (42) ಎಂಬತಾನೇ ತನ್ನ ಕ್ರೂರ ಕ್ರೌರ್ಯಕ್ಕಾಗಿ ಜೈಲು ಪಾಲಾಗಿರುವ ಆರೋಪಿ ಆಗಿದ್ದಾನೆ.

ಪೊಲೀಸರು ಸಕಾಲಿಕವಾಗಿ ನೆರವಿಗೆ ಧಾವಿಸಿ, ಈತನ ಹೀನ ಕೃತ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 11-07-2025 ರಂದು ಸುಮಾರು 5 ವರ್ಷದ ಒಂದು ಹೆಣ್ಣು ಮಗು ಮೈ ಕೈ ಗಾಯಗೊಂಡು ಬಿಳಿಗೆರೆ ಸಮೀಪ ಒಂಟಿಯಾಗಿ ನಿಂತಿದ್ದಳು. ಈ ಬಗ್ಗೆ ತುರ್ತು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಸ್ವೀಕರಿಸಿದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ದಿನಾಂಕ 14-07-2025 ರಂದು ಮಡಿಕೇರಿಯ ಸರ್ಕಾರಿ “ಮಡಿಲು” ಕೇಂದ್ರಕ್ಕೆ ಸೇರಿಸಿದ್ದಾರೆ.

*ಐದು ವರ್ಷದ ಮಗುವಿನ ಮೈ ಕೈ ಸುಟ್ಟು ತೋಡಿಗೆ ತಳ್ಳಿದ್ದ*

ಪೊಲೀಸರು ದಿನಾಂಕ 14-07-2025 ರಂದು ಈ ಮಗುವಿನ ತಾಯಿ ಪಣಿ ಎರವರ ಭಾಗ್ಯರವರನ್ನು ಪತ್ತೆ ಮಾಡಿ ತನ್ನ ಮಗಳ ಭೇಟಿ ಮಾಡಿಸಿದ್ದಾರೆ. ಮಗುವಿನ ಮೂಗು, ಹಣೆ ಎರಡೂ ಮೈ, ಕೈ ಮತ್ತು ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿದುದ್ದು ಕಂಡು ಬಂದಿದೆ. ಮಗಳನ್ನು ವಿಚಾರಿಸಿದಾಗ, ತಂದೆ ರವಿ ಬೆಂಕಿಯಿಂದ ಸುಟ್ಟು, ದೊಣ್ಣೆಯಿಂದ ಹೊಡೆದು “ನಿನ್ನನ್ನು ಸಾಯಿಸುತ್ತೇನೆ” ಎಂದು ಹೇಳಿ ನೀರಿನ ತೋಡಿಗೆ ತಳ್ಳಿ ಹೋಗಿದ್ದು, ನಂತರ ತೋಡಿನಿಂದ ಎದ್ದು ರಸ್ತೆಯಲ್ಲಿ ನಿಂತಿದ್ದಾಗ ನನ್ನನ್ನು ಪೊಲೀಸರು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಮಾಡಿಸಿರುತ್ತಾರೆ ಎಂದು ತಿಳಿಸಿದ್ದಾಳೆ.

ಹೀಗಾಗಿ ಮಗುವಿನ ಕೈ ಮೈ ಬೆಂಕಿಯಿಂದ ಸುಟ್ಟು ಹಾಗೂ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿರುವ ಪಂಜರಿ ಎರವರ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸ್ವೀಕರಿಸಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 115(2), 118(1), 109 BNS ಕಾಯ್ದೆ 2023 ಮತ್ತು 75 ಜೆ.ಜೆ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

*ಮತ್ತೊಬ್ಬಳನ್ನು ದೊಣ್ಣಯಿಂದ ಥಳಿಸಿ ಕೊಂದಿದ್ದ*

ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ನಿವಾಸಿ ಕಳ್ಳಿಯಪ್ಪಂಡ ಸೋಮಯ್ಯರವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಭಾಗ್ಯರವರ ಎರಡನೇ ಗಂಡನಾದ ಆರೋಪಿ ಪಣಿ ಎರವರ ರವಿ, ಮಂಚಳ್ಳಿ ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದಾಗ ಒಂದು ತಿಂಗಳ ಹಿಂದೆ ಭಾಗ್ಯಳ ಮೊದಲನೇ ಗಂಡನ ಮತ್ತೊಬ್ಬಳು ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾದ ಹಿನ್ನೆಲೆ, ಕುಟ್ಟ ಪೊಲೀಸ್ ಠಾಣೆಯಲ್ಲಿ ಕಲಂ 103(1), 238(ಎ) BNS ಕಾಯ್ದೆ 2023ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಎರಡು ಪ್ರಕರಣಗಳ ತನಿಖೆಗಾಗಿ ವಿರಾಜಪೇಟೆ ಉಪ ವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ಮಡಿಕೇರಿ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರ, ಮಡಿಕೇರಿ ಮತ್ತು ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 19-07-2025 ರಂದು ದೇವರಪುರ ತಿತಿಮತಿ ನಿವಾಸಿ ಆರೋಪಿ ಪಂಜರಿ ಎರವರ ರವಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 hour ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

4 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

6 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

10 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

13 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago