Categories: ಕೊಡಗು

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ್ದಾನೆ. ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದು
ಕಾರಾಗೃಹ ಸೇರಿದ್ದಾನೆ. ದೇವರಪುರ, ತಿತಿಮತಿ ಗ್ರಾಮದ ಪಂಜಿರ ಎರವರ ರವಿ (42) ಎಂಬತಾನೇ ತನ್ನ ಕ್ರೂರ ಕ್ರೌರ್ಯಕ್ಕಾಗಿ ಜೈಲು ಪಾಲಾಗಿರುವ ಆರೋಪಿ ಆಗಿದ್ದಾನೆ.

ಪೊಲೀಸರು ಸಕಾಲಿಕವಾಗಿ ನೆರವಿಗೆ ಧಾವಿಸಿ, ಈತನ ಹೀನ ಕೃತ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 11-07-2025 ರಂದು ಸುಮಾರು 5 ವರ್ಷದ ಒಂದು ಹೆಣ್ಣು ಮಗು ಮೈ ಕೈ ಗಾಯಗೊಂಡು ಬಿಳಿಗೆರೆ ಸಮೀಪ ಒಂಟಿಯಾಗಿ ನಿಂತಿದ್ದಳು. ಈ ಬಗ್ಗೆ ತುರ್ತು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಸ್ವೀಕರಿಸಿದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ದಿನಾಂಕ 14-07-2025 ರಂದು ಮಡಿಕೇರಿಯ ಸರ್ಕಾರಿ “ಮಡಿಲು” ಕೇಂದ್ರಕ್ಕೆ ಸೇರಿಸಿದ್ದಾರೆ.

*ಐದು ವರ್ಷದ ಮಗುವಿನ ಮೈ ಕೈ ಸುಟ್ಟು ತೋಡಿಗೆ ತಳ್ಳಿದ್ದ*

ಪೊಲೀಸರು ದಿನಾಂಕ 14-07-2025 ರಂದು ಈ ಮಗುವಿನ ತಾಯಿ ಪಣಿ ಎರವರ ಭಾಗ್ಯರವರನ್ನು ಪತ್ತೆ ಮಾಡಿ ತನ್ನ ಮಗಳ ಭೇಟಿ ಮಾಡಿಸಿದ್ದಾರೆ. ಮಗುವಿನ ಮೂಗು, ಹಣೆ ಎರಡೂ ಮೈ, ಕೈ ಮತ್ತು ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿದುದ್ದು ಕಂಡು ಬಂದಿದೆ. ಮಗಳನ್ನು ವಿಚಾರಿಸಿದಾಗ, ತಂದೆ ರವಿ ಬೆಂಕಿಯಿಂದ ಸುಟ್ಟು, ದೊಣ್ಣೆಯಿಂದ ಹೊಡೆದು “ನಿನ್ನನ್ನು ಸಾಯಿಸುತ್ತೇನೆ” ಎಂದು ಹೇಳಿ ನೀರಿನ ತೋಡಿಗೆ ತಳ್ಳಿ ಹೋಗಿದ್ದು, ನಂತರ ತೋಡಿನಿಂದ ಎದ್ದು ರಸ್ತೆಯಲ್ಲಿ ನಿಂತಿದ್ದಾಗ ನನ್ನನ್ನು ಪೊಲೀಸರು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಮಾಡಿಸಿರುತ್ತಾರೆ ಎಂದು ತಿಳಿಸಿದ್ದಾಳೆ.

ಹೀಗಾಗಿ ಮಗುವಿನ ಕೈ ಮೈ ಬೆಂಕಿಯಿಂದ ಸುಟ್ಟು ಹಾಗೂ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿರುವ ಪಂಜರಿ ಎರವರ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸ್ವೀಕರಿಸಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 115(2), 118(1), 109 BNS ಕಾಯ್ದೆ 2023 ಮತ್ತು 75 ಜೆ.ಜೆ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

*ಮತ್ತೊಬ್ಬಳನ್ನು ದೊಣ್ಣಯಿಂದ ಥಳಿಸಿ ಕೊಂದಿದ್ದ*

ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ನಿವಾಸಿ ಕಳ್ಳಿಯಪ್ಪಂಡ ಸೋಮಯ್ಯರವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಭಾಗ್ಯರವರ ಎರಡನೇ ಗಂಡನಾದ ಆರೋಪಿ ಪಣಿ ಎರವರ ರವಿ, ಮಂಚಳ್ಳಿ ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದಾಗ ಒಂದು ತಿಂಗಳ ಹಿಂದೆ ಭಾಗ್ಯಳ ಮೊದಲನೇ ಗಂಡನ ಮತ್ತೊಬ್ಬಳು ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾದ ಹಿನ್ನೆಲೆ, ಕುಟ್ಟ ಪೊಲೀಸ್ ಠಾಣೆಯಲ್ಲಿ ಕಲಂ 103(1), 238(ಎ) BNS ಕಾಯ್ದೆ 2023ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಎರಡು ಪ್ರಕರಣಗಳ ತನಿಖೆಗಾಗಿ ವಿರಾಜಪೇಟೆ ಉಪ ವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ಮಡಿಕೇರಿ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರ, ಮಡಿಕೇರಿ ಮತ್ತು ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 19-07-2025 ರಂದು ದೇವರಪುರ ತಿತಿಮತಿ ನಿವಾಸಿ ಆರೋಪಿ ಪಂಜರಿ ಎರವರ ರವಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

8 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

19 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

20 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago