Categories: ಕೊಡಗು

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ್ದಾನೆ. ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದು
ಕಾರಾಗೃಹ ಸೇರಿದ್ದಾನೆ. ದೇವರಪುರ, ತಿತಿಮತಿ ಗ್ರಾಮದ ಪಂಜಿರ ಎರವರ ರವಿ (42) ಎಂಬತಾನೇ ತನ್ನ ಕ್ರೂರ ಕ್ರೌರ್ಯಕ್ಕಾಗಿ ಜೈಲು ಪಾಲಾಗಿರುವ ಆರೋಪಿ ಆಗಿದ್ದಾನೆ.

ಪೊಲೀಸರು ಸಕಾಲಿಕವಾಗಿ ನೆರವಿಗೆ ಧಾವಿಸಿ, ಈತನ ಹೀನ ಕೃತ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 11-07-2025 ರಂದು ಸುಮಾರು 5 ವರ್ಷದ ಒಂದು ಹೆಣ್ಣು ಮಗು ಮೈ ಕೈ ಗಾಯಗೊಂಡು ಬಿಳಿಗೆರೆ ಸಮೀಪ ಒಂಟಿಯಾಗಿ ನಿಂತಿದ್ದಳು. ಈ ಬಗ್ಗೆ ತುರ್ತು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಸ್ವೀಕರಿಸಿದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ದಿನಾಂಕ 14-07-2025 ರಂದು ಮಡಿಕೇರಿಯ ಸರ್ಕಾರಿ “ಮಡಿಲು” ಕೇಂದ್ರಕ್ಕೆ ಸೇರಿಸಿದ್ದಾರೆ.

*ಐದು ವರ್ಷದ ಮಗುವಿನ ಮೈ ಕೈ ಸುಟ್ಟು ತೋಡಿಗೆ ತಳ್ಳಿದ್ದ*

ಪೊಲೀಸರು ದಿನಾಂಕ 14-07-2025 ರಂದು ಈ ಮಗುವಿನ ತಾಯಿ ಪಣಿ ಎರವರ ಭಾಗ್ಯರವರನ್ನು ಪತ್ತೆ ಮಾಡಿ ತನ್ನ ಮಗಳ ಭೇಟಿ ಮಾಡಿಸಿದ್ದಾರೆ. ಮಗುವಿನ ಮೂಗು, ಹಣೆ ಎರಡೂ ಮೈ, ಕೈ ಮತ್ತು ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿದುದ್ದು ಕಂಡು ಬಂದಿದೆ. ಮಗಳನ್ನು ವಿಚಾರಿಸಿದಾಗ, ತಂದೆ ರವಿ ಬೆಂಕಿಯಿಂದ ಸುಟ್ಟು, ದೊಣ್ಣೆಯಿಂದ ಹೊಡೆದು “ನಿನ್ನನ್ನು ಸಾಯಿಸುತ್ತೇನೆ” ಎಂದು ಹೇಳಿ ನೀರಿನ ತೋಡಿಗೆ ತಳ್ಳಿ ಹೋಗಿದ್ದು, ನಂತರ ತೋಡಿನಿಂದ ಎದ್ದು ರಸ್ತೆಯಲ್ಲಿ ನಿಂತಿದ್ದಾಗ ನನ್ನನ್ನು ಪೊಲೀಸರು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಮಾಡಿಸಿರುತ್ತಾರೆ ಎಂದು ತಿಳಿಸಿದ್ದಾಳೆ.

ಹೀಗಾಗಿ ಮಗುವಿನ ಕೈ ಮೈ ಬೆಂಕಿಯಿಂದ ಸುಟ್ಟು ಹಾಗೂ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿರುವ ಪಂಜರಿ ಎರವರ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸ್ವೀಕರಿಸಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 115(2), 118(1), 109 BNS ಕಾಯ್ದೆ 2023 ಮತ್ತು 75 ಜೆ.ಜೆ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

*ಮತ್ತೊಬ್ಬಳನ್ನು ದೊಣ್ಣಯಿಂದ ಥಳಿಸಿ ಕೊಂದಿದ್ದ*

ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ನಿವಾಸಿ ಕಳ್ಳಿಯಪ್ಪಂಡ ಸೋಮಯ್ಯರವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಭಾಗ್ಯರವರ ಎರಡನೇ ಗಂಡನಾದ ಆರೋಪಿ ಪಣಿ ಎರವರ ರವಿ, ಮಂಚಳ್ಳಿ ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದಾಗ ಒಂದು ತಿಂಗಳ ಹಿಂದೆ ಭಾಗ್ಯಳ ಮೊದಲನೇ ಗಂಡನ ಮತ್ತೊಬ್ಬಳು ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾದ ಹಿನ್ನೆಲೆ, ಕುಟ್ಟ ಪೊಲೀಸ್ ಠಾಣೆಯಲ್ಲಿ ಕಲಂ 103(1), 238(ಎ) BNS ಕಾಯ್ದೆ 2023ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಎರಡು ಪ್ರಕರಣಗಳ ತನಿಖೆಗಾಗಿ ವಿರಾಜಪೇಟೆ ಉಪ ವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ಮಡಿಕೇರಿ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರ, ಮಡಿಕೇರಿ ಮತ್ತು ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 19-07-2025 ರಂದು ದೇವರಪುರ ತಿತಿಮತಿ ನಿವಾಸಿ ಆರೋಪಿ ಪಂಜರಿ ಎರವರ ರವಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

5 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

15 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

16 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago