Categories: ಕೊಡಗು

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ್ದಾನೆ. ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದು
ಕಾರಾಗೃಹ ಸೇರಿದ್ದಾನೆ. ದೇವರಪುರ, ತಿತಿಮತಿ ಗ್ರಾಮದ ಪಂಜಿರ ಎರವರ ರವಿ (42) ಎಂಬತಾನೇ ತನ್ನ ಕ್ರೂರ ಕ್ರೌರ್ಯಕ್ಕಾಗಿ ಜೈಲು ಪಾಲಾಗಿರುವ ಆರೋಪಿ ಆಗಿದ್ದಾನೆ.

ಪೊಲೀಸರು ಸಕಾಲಿಕವಾಗಿ ನೆರವಿಗೆ ಧಾವಿಸಿ, ಈತನ ಹೀನ ಕೃತ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 11-07-2025 ರಂದು ಸುಮಾರು 5 ವರ್ಷದ ಒಂದು ಹೆಣ್ಣು ಮಗು ಮೈ ಕೈ ಗಾಯಗೊಂಡು ಬಿಳಿಗೆರೆ ಸಮೀಪ ಒಂಟಿಯಾಗಿ ನಿಂತಿದ್ದಳು. ಈ ಬಗ್ಗೆ ತುರ್ತು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಸ್ವೀಕರಿಸಿದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ದಿನಾಂಕ 14-07-2025 ರಂದು ಮಡಿಕೇರಿಯ ಸರ್ಕಾರಿ “ಮಡಿಲು” ಕೇಂದ್ರಕ್ಕೆ ಸೇರಿಸಿದ್ದಾರೆ.

*ಐದು ವರ್ಷದ ಮಗುವಿನ ಮೈ ಕೈ ಸುಟ್ಟು ತೋಡಿಗೆ ತಳ್ಳಿದ್ದ*

ಪೊಲೀಸರು ದಿನಾಂಕ 14-07-2025 ರಂದು ಈ ಮಗುವಿನ ತಾಯಿ ಪಣಿ ಎರವರ ಭಾಗ್ಯರವರನ್ನು ಪತ್ತೆ ಮಾಡಿ ತನ್ನ ಮಗಳ ಭೇಟಿ ಮಾಡಿಸಿದ್ದಾರೆ. ಮಗುವಿನ ಮೂಗು, ಹಣೆ ಎರಡೂ ಮೈ, ಕೈ ಮತ್ತು ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿದುದ್ದು ಕಂಡು ಬಂದಿದೆ. ಮಗಳನ್ನು ವಿಚಾರಿಸಿದಾಗ, ತಂದೆ ರವಿ ಬೆಂಕಿಯಿಂದ ಸುಟ್ಟು, ದೊಣ್ಣೆಯಿಂದ ಹೊಡೆದು “ನಿನ್ನನ್ನು ಸಾಯಿಸುತ್ತೇನೆ” ಎಂದು ಹೇಳಿ ನೀರಿನ ತೋಡಿಗೆ ತಳ್ಳಿ ಹೋಗಿದ್ದು, ನಂತರ ತೋಡಿನಿಂದ ಎದ್ದು ರಸ್ತೆಯಲ್ಲಿ ನಿಂತಿದ್ದಾಗ ನನ್ನನ್ನು ಪೊಲೀಸರು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಮಾಡಿಸಿರುತ್ತಾರೆ ಎಂದು ತಿಳಿಸಿದ್ದಾಳೆ.

ಹೀಗಾಗಿ ಮಗುವಿನ ಕೈ ಮೈ ಬೆಂಕಿಯಿಂದ ಸುಟ್ಟು ಹಾಗೂ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿರುವ ಪಂಜರಿ ಎರವರ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸ್ವೀಕರಿಸಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 115(2), 118(1), 109 BNS ಕಾಯ್ದೆ 2023 ಮತ್ತು 75 ಜೆ.ಜೆ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

*ಮತ್ತೊಬ್ಬಳನ್ನು ದೊಣ್ಣಯಿಂದ ಥಳಿಸಿ ಕೊಂದಿದ್ದ*

ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ನಿವಾಸಿ ಕಳ್ಳಿಯಪ್ಪಂಡ ಸೋಮಯ್ಯರವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಭಾಗ್ಯರವರ ಎರಡನೇ ಗಂಡನಾದ ಆರೋಪಿ ಪಣಿ ಎರವರ ರವಿ, ಮಂಚಳ್ಳಿ ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದಾಗ ಒಂದು ತಿಂಗಳ ಹಿಂದೆ ಭಾಗ್ಯಳ ಮೊದಲನೇ ಗಂಡನ ಮತ್ತೊಬ್ಬಳು ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾದ ಹಿನ್ನೆಲೆ, ಕುಟ್ಟ ಪೊಲೀಸ್ ಠಾಣೆಯಲ್ಲಿ ಕಲಂ 103(1), 238(ಎ) BNS ಕಾಯ್ದೆ 2023ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಎರಡು ಪ್ರಕರಣಗಳ ತನಿಖೆಗಾಗಿ ವಿರಾಜಪೇಟೆ ಉಪ ವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ಮಡಿಕೇರಿ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರ, ಮಡಿಕೇರಿ ಮತ್ತು ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 19-07-2025 ರಂದು ದೇವರಪುರ ತಿತಿಮತಿ ನಿವಾಸಿ ಆರೋಪಿ ಪಂಜರಿ ಎರವರ ರವಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

27 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago