Categories: ಕೊಡಗು

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ್ದಾನೆ. ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದು
ಕಾರಾಗೃಹ ಸೇರಿದ್ದಾನೆ. ದೇವರಪುರ, ತಿತಿಮತಿ ಗ್ರಾಮದ ಪಂಜಿರ ಎರವರ ರವಿ (42) ಎಂಬತಾನೇ ತನ್ನ ಕ್ರೂರ ಕ್ರೌರ್ಯಕ್ಕಾಗಿ ಜೈಲು ಪಾಲಾಗಿರುವ ಆರೋಪಿ ಆಗಿದ್ದಾನೆ.

ಪೊಲೀಸರು ಸಕಾಲಿಕವಾಗಿ ನೆರವಿಗೆ ಧಾವಿಸಿ, ಈತನ ಹೀನ ಕೃತ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 11-07-2025 ರಂದು ಸುಮಾರು 5 ವರ್ಷದ ಒಂದು ಹೆಣ್ಣು ಮಗು ಮೈ ಕೈ ಗಾಯಗೊಂಡು ಬಿಳಿಗೆರೆ ಸಮೀಪ ಒಂಟಿಯಾಗಿ ನಿಂತಿದ್ದಳು. ಈ ಬಗ್ಗೆ ತುರ್ತು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಸ್ವೀಕರಿಸಿದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ದಿನಾಂಕ 14-07-2025 ರಂದು ಮಡಿಕೇರಿಯ ಸರ್ಕಾರಿ “ಮಡಿಲು” ಕೇಂದ್ರಕ್ಕೆ ಸೇರಿಸಿದ್ದಾರೆ.

*ಐದು ವರ್ಷದ ಮಗುವಿನ ಮೈ ಕೈ ಸುಟ್ಟು ತೋಡಿಗೆ ತಳ್ಳಿದ್ದ*

ಪೊಲೀಸರು ದಿನಾಂಕ 14-07-2025 ರಂದು ಈ ಮಗುವಿನ ತಾಯಿ ಪಣಿ ಎರವರ ಭಾಗ್ಯರವರನ್ನು ಪತ್ತೆ ಮಾಡಿ ತನ್ನ ಮಗಳ ಭೇಟಿ ಮಾಡಿಸಿದ್ದಾರೆ. ಮಗುವಿನ ಮೂಗು, ಹಣೆ ಎರಡೂ ಮೈ, ಕೈ ಮತ್ತು ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿದುದ್ದು ಕಂಡು ಬಂದಿದೆ. ಮಗಳನ್ನು ವಿಚಾರಿಸಿದಾಗ, ತಂದೆ ರವಿ ಬೆಂಕಿಯಿಂದ ಸುಟ್ಟು, ದೊಣ್ಣೆಯಿಂದ ಹೊಡೆದು “ನಿನ್ನನ್ನು ಸಾಯಿಸುತ್ತೇನೆ” ಎಂದು ಹೇಳಿ ನೀರಿನ ತೋಡಿಗೆ ತಳ್ಳಿ ಹೋಗಿದ್ದು, ನಂತರ ತೋಡಿನಿಂದ ಎದ್ದು ರಸ್ತೆಯಲ್ಲಿ ನಿಂತಿದ್ದಾಗ ನನ್ನನ್ನು ಪೊಲೀಸರು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಮಾಡಿಸಿರುತ್ತಾರೆ ಎಂದು ತಿಳಿಸಿದ್ದಾಳೆ.

ಹೀಗಾಗಿ ಮಗುವಿನ ಕೈ ಮೈ ಬೆಂಕಿಯಿಂದ ಸುಟ್ಟು ಹಾಗೂ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿರುವ ಪಂಜರಿ ಎರವರ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸ್ವೀಕರಿಸಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 115(2), 118(1), 109 BNS ಕಾಯ್ದೆ 2023 ಮತ್ತು 75 ಜೆ.ಜೆ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

*ಮತ್ತೊಬ್ಬಳನ್ನು ದೊಣ್ಣಯಿಂದ ಥಳಿಸಿ ಕೊಂದಿದ್ದ*

ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ನಿವಾಸಿ ಕಳ್ಳಿಯಪ್ಪಂಡ ಸೋಮಯ್ಯರವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಭಾಗ್ಯರವರ ಎರಡನೇ ಗಂಡನಾದ ಆರೋಪಿ ಪಣಿ ಎರವರ ರವಿ, ಮಂಚಳ್ಳಿ ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದಾಗ ಒಂದು ತಿಂಗಳ ಹಿಂದೆ ಭಾಗ್ಯಳ ಮೊದಲನೇ ಗಂಡನ ಮತ್ತೊಬ್ಬಳು ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾದ ಹಿನ್ನೆಲೆ, ಕುಟ್ಟ ಪೊಲೀಸ್ ಠಾಣೆಯಲ್ಲಿ ಕಲಂ 103(1), 238(ಎ) BNS ಕಾಯ್ದೆ 2023ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಎರಡು ಪ್ರಕರಣಗಳ ತನಿಖೆಗಾಗಿ ವಿರಾಜಪೇಟೆ ಉಪ ವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ಮಡಿಕೇರಿ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರ, ಮಡಿಕೇರಿ ಮತ್ತು ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 19-07-2025 ರಂದು ದೇವರಪುರ ತಿತಿಮತಿ ನಿವಾಸಿ ಆರೋಪಿ ಪಂಜರಿ ಎರವರ ರವಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

4 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago