Categories: ಕೊಡಗು

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು ಸುಟ್ಟು ದೊಣ್ಣೆಯಿಂದ ಹೊಡೆದು ಹರಿಯುವ ನೀರಿನ ತೋಡಿಗೆ ತಳ್ಳಿ ಸಾಯಿಸಲು ಯತ್ನಿಸಿದ್ದಾನೆ. ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದು
ಕಾರಾಗೃಹ ಸೇರಿದ್ದಾನೆ. ದೇವರಪುರ, ತಿತಿಮತಿ ಗ್ರಾಮದ ಪಂಜಿರ ಎರವರ ರವಿ (42) ಎಂಬತಾನೇ ತನ್ನ ಕ್ರೂರ ಕ್ರೌರ್ಯಕ್ಕಾಗಿ ಜೈಲು ಪಾಲಾಗಿರುವ ಆರೋಪಿ ಆಗಿದ್ದಾನೆ.

ಪೊಲೀಸರು ಸಕಾಲಿಕವಾಗಿ ನೆರವಿಗೆ ಧಾವಿಸಿ, ಈತನ ಹೀನ ಕೃತ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 11-07-2025 ರಂದು ಸುಮಾರು 5 ವರ್ಷದ ಒಂದು ಹೆಣ್ಣು ಮಗು ಮೈ ಕೈ ಗಾಯಗೊಂಡು ಬಿಳಿಗೆರೆ ಸಮೀಪ ಒಂಟಿಯಾಗಿ ನಿಂತಿದ್ದಳು. ಈ ಬಗ್ಗೆ ತುರ್ತು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಸ್ವೀಕರಿಸಿದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ದಿನಾಂಕ 14-07-2025 ರಂದು ಮಡಿಕೇರಿಯ ಸರ್ಕಾರಿ “ಮಡಿಲು” ಕೇಂದ್ರಕ್ಕೆ ಸೇರಿಸಿದ್ದಾರೆ.

*ಐದು ವರ್ಷದ ಮಗುವಿನ ಮೈ ಕೈ ಸುಟ್ಟು ತೋಡಿಗೆ ತಳ್ಳಿದ್ದ*

ಪೊಲೀಸರು ದಿನಾಂಕ 14-07-2025 ರಂದು ಈ ಮಗುವಿನ ತಾಯಿ ಪಣಿ ಎರವರ ಭಾಗ್ಯರವರನ್ನು ಪತ್ತೆ ಮಾಡಿ ತನ್ನ ಮಗಳ ಭೇಟಿ ಮಾಡಿಸಿದ್ದಾರೆ. ಮಗುವಿನ ಮೂಗು, ಹಣೆ ಎರಡೂ ಮೈ, ಕೈ ಮತ್ತು ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿದುದ್ದು ಕಂಡು ಬಂದಿದೆ. ಮಗಳನ್ನು ವಿಚಾರಿಸಿದಾಗ, ತಂದೆ ರವಿ ಬೆಂಕಿಯಿಂದ ಸುಟ್ಟು, ದೊಣ್ಣೆಯಿಂದ ಹೊಡೆದು “ನಿನ್ನನ್ನು ಸಾಯಿಸುತ್ತೇನೆ” ಎಂದು ಹೇಳಿ ನೀರಿನ ತೋಡಿಗೆ ತಳ್ಳಿ ಹೋಗಿದ್ದು, ನಂತರ ತೋಡಿನಿಂದ ಎದ್ದು ರಸ್ತೆಯಲ್ಲಿ ನಿಂತಿದ್ದಾಗ ನನ್ನನ್ನು ಪೊಲೀಸರು ಅಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಮಾಡಿಸಿರುತ್ತಾರೆ ಎಂದು ತಿಳಿಸಿದ್ದಾಳೆ.

ಹೀಗಾಗಿ ಮಗುವಿನ ಕೈ ಮೈ ಬೆಂಕಿಯಿಂದ ಸುಟ್ಟು ಹಾಗೂ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿರುವ ಪಂಜರಿ ಎರವರ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸ್ವೀಕರಿಸಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 115(2), 118(1), 109 BNS ಕಾಯ್ದೆ 2023 ಮತ್ತು 75 ಜೆ.ಜೆ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

*ಮತ್ತೊಬ್ಬಳನ್ನು ದೊಣ್ಣಯಿಂದ ಥಳಿಸಿ ಕೊಂದಿದ್ದ*

ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಗುಪ್ಪೆ ಗ್ರಾಮದ ನಿವಾಸಿ ಕಳ್ಳಿಯಪ್ಪಂಡ ಸೋಮಯ್ಯರವರ ಲೈನ್ ಮನೆಯಲ್ಲಿ ವಾಸವಾಗಿರುವ ಪಣಿ ಎರವರ ಭಾಗ್ಯರವರ ಎರಡನೇ ಗಂಡನಾದ ಆರೋಪಿ ಪಣಿ ಎರವರ ರವಿ, ಮಂಚಳ್ಳಿ ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದಾಗ ಒಂದು ತಿಂಗಳ ಹಿಂದೆ ಭಾಗ್ಯಳ ಮೊದಲನೇ ಗಂಡನ ಮತ್ತೊಬ್ಬಳು ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾದ ಹಿನ್ನೆಲೆ, ಕುಟ್ಟ ಪೊಲೀಸ್ ಠಾಣೆಯಲ್ಲಿ ಕಲಂ 103(1), 238(ಎ) BNS ಕಾಯ್ದೆ 2023ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಎರಡು ಪ್ರಕರಣಗಳ ತನಿಖೆಗಾಗಿ ವಿರಾಜಪೇಟೆ ಉಪ ವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ಮಡಿಕೇರಿ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರ, ಮಡಿಕೇರಿ ಮತ್ತು ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 19-07-2025 ರಂದು ದೇವರಪುರ ತಿತಿಮತಿ ನಿವಾಸಿ ಆರೋಪಿ ಪಂಜರಿ ಎರವರ ರವಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago