ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ: ಸೂಕ್ತ ಸಮಯಕ್ಕೆ ಬಾರದ ಆಂಬುಲೆನ್ಸ್: ರಕ್ತದ ಮಡುವಿನಲ್ಲಿ ಗಾಯಾಳುಗಳ ನರಳಾಟ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ, ಸಾಸಲು ರಸ್ತೆಯ ಗುಮ್ಮನಹಳ್ಳಿ ಸಮೀಪ ಇಂದು ಸಂಜೆ ನಡೆದಿದೆ.

ತಾಲೂಕಿನ ಗುಮ್ಮನಹಳ್ಳಿ-ಲಿಂಗದವೀರನಹಳ್ಳಿ ಗೇಟ್ ನಡುವಿನ ತಿರುವಿನಲ್ಲಿ ಮುಖಾಮುಖಿಯಾದ ಸ್ಕೂಟರ್ ಮತ್ತು ಬೈಕ್‌ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ತಾಲೂಕಿನ ಬಿಜವಾರ ಗ್ರಾಮದ ತಾಯಿ ಮತ್ತು ಮಗ ಎನ್ನಲಾಗಿದ್ದು, ಇನ್ನಿಬ್ಬರು ನೇಪಾಳಿ ಮೂಲದವರು ಎನ್ನಲಾಗುತ್ತಿದೆ.

ಘಟನೆ ಬೆನ್ನಲ್ಲೇ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು ಆಂಬುಲೆನ್ಸ್ ಗೆ ಕರೆ ಮಾಡಿ ಒಂದೂವರೆ ಗಂಟೆ ಕಾದರು ಸ್ಥಳಕ್ಕೆ ಬಾರದೆ ಇರುವ ಕಾರಣ, ಗಾಯಾಳುಗಳು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು.

ಘಟನೆ ಸಂಭವಿಸಿದ ದಾರಿಯಲ್ಲಿಯೇ ತೆರಳುತ್ತಿದ್ದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು, ಅಪಘಾತ ಕಂಡು ಕಾರು ನಿಲ್ಲಿಸಿ ಸ್ಥಳಕ್ಕೆ ಬಂದು, ಆಂಬುಲೆನ್ಸ್ ಬಾರದ ಹಿನ್ನೆಲೆ ಸಂಬಂಧಪಟ್ಟವರಿಗೆ ಹಾಗೂ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ, ತಮ್ಮ ಕಾರಿನಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲು ಮುಂದಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು‌.

ಹೊಸಹಳ್ಳಿ ಮತ್ತು ದೊಡ್ಡಬೆಳವಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯ ನಡುವೆ ಘಟನೆ ಸಂಭವಿಸಿದ್ದು, ಯಾವ ಠಾಣೆ ವ್ಯಾಪ್ತಿಯೆಂದು ಸದ್ಯ ಖಚಿತವಾಗಿಲ್ಲ.

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೆನ್ಸ್ ಲಭ್ಯವಿಲ್ಲವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ ಇರುವುದರಿಂದ ಕೆರಳಿದ ಯುವಕರು ಸಾಸಲು ಸರ್ಕಾರಿ ಆಸ್ಪತ್ರೆ ಬಾಗಿಲಿಗೆ ಬೇಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಸಲು ಹೋಬಳಿ ಕೇಂದ್ರವಾಗಿದ್ದು, 24X7 ಕಾರ್ಯನಿರ್ವಹಿಸಬೇಕಿದೆ. ಆದರೆ ಇಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯಿಂದ ರೋಗಿಗಳಿಗೆ, ಅಪಘಾತದಲ್ಲಿ ಗಾಯಗೊಂಡವರಿಗೆ ಯಾವುದೇ ಸೌಲಭ್ಯ ದೊರಕುತ್ತಿಲ್ಲವೆಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿ ಬೇಲಿ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

3 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

4 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

4 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

6 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

17 hours ago