ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ, ಸಾಸಲು ರಸ್ತೆಯ ಗುಮ್ಮನಹಳ್ಳಿ ಸಮೀಪ ಇಂದು ಸಂಜೆ ನಡೆದಿದೆ.
ತಾಲೂಕಿನ ಗುಮ್ಮನಹಳ್ಳಿ-ಲಿಂಗದವೀರನಹಳ್ಳಿ ಗೇಟ್ ನಡುವಿನ ತಿರುವಿನಲ್ಲಿ ಮುಖಾಮುಖಿಯಾದ ಸ್ಕೂಟರ್ ಮತ್ತು ಬೈಕ್ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ತಾಲೂಕಿನ ಬಿಜವಾರ ಗ್ರಾಮದ ತಾಯಿ ಮತ್ತು ಮಗ ಎನ್ನಲಾಗಿದ್ದು, ಇನ್ನಿಬ್ಬರು ನೇಪಾಳಿ ಮೂಲದವರು ಎನ್ನಲಾಗುತ್ತಿದೆ.
ಘಟನೆ ಬೆನ್ನಲ್ಲೇ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು ಆಂಬುಲೆನ್ಸ್ ಗೆ ಕರೆ ಮಾಡಿ ಒಂದೂವರೆ ಗಂಟೆ ಕಾದರು ಸ್ಥಳಕ್ಕೆ ಬಾರದೆ ಇರುವ ಕಾರಣ, ಗಾಯಾಳುಗಳು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು.
ಘಟನೆ ಸಂಭವಿಸಿದ ದಾರಿಯಲ್ಲಿಯೇ ತೆರಳುತ್ತಿದ್ದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು, ಅಪಘಾತ ಕಂಡು ಕಾರು ನಿಲ್ಲಿಸಿ ಸ್ಥಳಕ್ಕೆ ಬಂದು, ಆಂಬುಲೆನ್ಸ್ ಬಾರದ ಹಿನ್ನೆಲೆ ಸಂಬಂಧಪಟ್ಟವರಿಗೆ ಹಾಗೂ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ, ತಮ್ಮ ಕಾರಿನಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲು ಮುಂದಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಹೊಸಹಳ್ಳಿ ಮತ್ತು ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ನಡುವೆ ಘಟನೆ ಸಂಭವಿಸಿದ್ದು, ಯಾವ ಠಾಣೆ ವ್ಯಾಪ್ತಿಯೆಂದು ಸದ್ಯ ಖಚಿತವಾಗಿಲ್ಲ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೆನ್ಸ್ ಲಭ್ಯವಿಲ್ಲವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ ಇರುವುದರಿಂದ ಕೆರಳಿದ ಯುವಕರು ಸಾಸಲು ಸರ್ಕಾರಿ ಆಸ್ಪತ್ರೆ ಬಾಗಿಲಿಗೆ ಬೇಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಸಲು ಹೋಬಳಿ ಕೇಂದ್ರವಾಗಿದ್ದು, 24X7 ಕಾರ್ಯನಿರ್ವಹಿಸಬೇಕಿದೆ. ಆದರೆ ಇಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯಿಂದ ರೋಗಿಗಳಿಗೆ, ಅಪಘಾತದಲ್ಲಿ ಗಾಯಗೊಂಡವರಿಗೆ ಯಾವುದೇ ಸೌಲಭ್ಯ ದೊರಕುತ್ತಿಲ್ಲವೆಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿ ಬೇಲಿ ಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…