ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ: ಸೂಕ್ತ ಸಮಯಕ್ಕೆ ಬಾರದ ಆಂಬುಲೆನ್ಸ್: ರಕ್ತದ ಮಡುವಿನಲ್ಲಿ ಗಾಯಾಳುಗಳ ನರಳಾಟ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ, ಸಾಸಲು ರಸ್ತೆಯ ಗುಮ್ಮನಹಳ್ಳಿ ಸಮೀಪ ಇಂದು ಸಂಜೆ ನಡೆದಿದೆ.

ತಾಲೂಕಿನ ಗುಮ್ಮನಹಳ್ಳಿ-ಲಿಂಗದವೀರನಹಳ್ಳಿ ಗೇಟ್ ನಡುವಿನ ತಿರುವಿನಲ್ಲಿ ಮುಖಾಮುಖಿಯಾದ ಸ್ಕೂಟರ್ ಮತ್ತು ಬೈಕ್‌ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ತಾಲೂಕಿನ ಬಿಜವಾರ ಗ್ರಾಮದ ತಾಯಿ ಮತ್ತು ಮಗ ಎನ್ನಲಾಗಿದ್ದು, ಇನ್ನಿಬ್ಬರು ನೇಪಾಳಿ ಮೂಲದವರು ಎನ್ನಲಾಗುತ್ತಿದೆ.

ಘಟನೆ ಬೆನ್ನಲ್ಲೇ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು ಆಂಬುಲೆನ್ಸ್ ಗೆ ಕರೆ ಮಾಡಿ ಒಂದೂವರೆ ಗಂಟೆ ಕಾದರು ಸ್ಥಳಕ್ಕೆ ಬಾರದೆ ಇರುವ ಕಾರಣ, ಗಾಯಾಳುಗಳು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು.

ಘಟನೆ ಸಂಭವಿಸಿದ ದಾರಿಯಲ್ಲಿಯೇ ತೆರಳುತ್ತಿದ್ದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು, ಅಪಘಾತ ಕಂಡು ಕಾರು ನಿಲ್ಲಿಸಿ ಸ್ಥಳಕ್ಕೆ ಬಂದು, ಆಂಬುಲೆನ್ಸ್ ಬಾರದ ಹಿನ್ನೆಲೆ ಸಂಬಂಧಪಟ್ಟವರಿಗೆ ಹಾಗೂ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ, ತಮ್ಮ ಕಾರಿನಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲು ಮುಂದಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು‌.

ಹೊಸಹಳ್ಳಿ ಮತ್ತು ದೊಡ್ಡಬೆಳವಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯ ನಡುವೆ ಘಟನೆ ಸಂಭವಿಸಿದ್ದು, ಯಾವ ಠಾಣೆ ವ್ಯಾಪ್ತಿಯೆಂದು ಸದ್ಯ ಖಚಿತವಾಗಿಲ್ಲ.

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೆನ್ಸ್ ಲಭ್ಯವಿಲ್ಲವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ ಇರುವುದರಿಂದ ಕೆರಳಿದ ಯುವಕರು ಸಾಸಲು ಸರ್ಕಾರಿ ಆಸ್ಪತ್ರೆ ಬಾಗಿಲಿಗೆ ಬೇಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಸಲು ಹೋಬಳಿ ಕೇಂದ್ರವಾಗಿದ್ದು, 24X7 ಕಾರ್ಯನಿರ್ವಹಿಸಬೇಕಿದೆ. ಆದರೆ ಇಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯಿಂದ ರೋಗಿಗಳಿಗೆ, ಅಪಘಾತದಲ್ಲಿ ಗಾಯಗೊಂಡವರಿಗೆ ಯಾವುದೇ ಸೌಲಭ್ಯ ದೊರಕುತ್ತಿಲ್ಲವೆಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿ ಬೇಲಿ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

15 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

21 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago