ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಲೂಕಿನ ಚಿಟವುಲ ಹಳ್ಳಿ ಗ್ರಾಮದ 40 ಅಂಜನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೌರಿಬಿದನೂರು ನಗರದ ಹೊರವಲಯದಲ್ಲಿರುವ ಶ್ರೀ ಕಾಲಿನಾಥೇಶ್ವರ ದೇವಸ್ಥಾನದ ಬಳಿ ನಡೆದಿದೆ.
ತಾಲೂಕಿನ ಚಿಟವುಲ ಹಳ್ಳಿ ಗ್ರಾಮದ ಅಂಜನ್ ಕುಮಾರ್ ಹೆಂಡತಿ ಇಂದೂ ತನ್ನ 5 ವರ್ಷದ ಮಗ ಅರ್ಜುನನ್ನು ಆಸ್ಪತ್ರೆಗೆ ತೋರಿಸಲೆಂದು KA-02-JD-3854 ದ್ವಿಚಕ್ರ ವಾಹನದಲ್ಲಿ ಗೌರಿಬಿದನವರಿಗೆ ಮೂರು ಜನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಈ ವೇಳೆ ಗೌರಿಬಿದನೂರು ಕಡೆಯಿಂದ KA-40-EK-3109 ಎಂಬ ದ್ವಿಚಕ್ರ ವಾಹನದಲ್ಲಿ ತಾಲ್ಲೂಕಿನ ಹುದುಗೂರು ಗ್ರಾಮದ ನಿವಾಸಿ ಲಿಖಿತ್ ಬಾಬು ಹೋಗುತ್ತಿದ್ದು ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ.
ಗಾಯಾಳುಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಲಿಖಿತ್ ಬಾಬು, ಇಂದೂ ಮತ್ತು ಅರ್ಜುನ್ ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗೌರಿಬಿದನೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.