ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಲೂಕಿನ ಚಿಟವುಲ ಹಳ್ಳಿ ಗ್ರಾಮದ 40 ಅಂಜನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೌರಿಬಿದನೂರು ನಗರದ ಹೊರವಲಯದಲ್ಲಿರುವ ಶ್ರೀ ಕಾಲಿನಾಥೇಶ್ವರ ದೇವಸ್ಥಾನದ ಬಳಿ ನಡೆದಿದೆ.
ತಾಲೂಕಿನ ಚಿಟವುಲ ಹಳ್ಳಿ ಗ್ರಾಮದ ಅಂಜನ್ ಕುಮಾರ್ ಹೆಂಡತಿ ಇಂದೂ ತನ್ನ 5 ವರ್ಷದ ಮಗ ಅರ್ಜುನನ್ನು ಆಸ್ಪತ್ರೆಗೆ ತೋರಿಸಲೆಂದು KA-02-JD-3854 ದ್ವಿಚಕ್ರ ವಾಹನದಲ್ಲಿ ಗೌರಿಬಿದನವರಿಗೆ ಮೂರು ಜನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಈ ವೇಳೆ ಗೌರಿಬಿದನೂರು ಕಡೆಯಿಂದ KA-40-EK-3109 ಎಂಬ ದ್ವಿಚಕ್ರ ವಾಹನದಲ್ಲಿ ತಾಲ್ಲೂಕಿನ ಹುದುಗೂರು ಗ್ರಾಮದ ನಿವಾಸಿ ಲಿಖಿತ್ ಬಾಬು ಹೋಗುತ್ತಿದ್ದು ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ.
ಗಾಯಾಳುಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಲಿಖಿತ್ ಬಾಬು, ಇಂದೂ ಮತ್ತು ಅರ್ಜುನ್ ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗೌರಿಬಿದನೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…