Categories: ಕೋಲಾರ

ದ್ವಿಚಕ್ರ ವಾಹನ ಕಳ್ಳನ ಬಂಧನ: 11 ದ್ವಿಚಕ್ರ ವಾಹನಗಳ ವಶ

ಕೋಲಾರ: ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿರುವ ಕೋಲಾರದ ಗಲ್‌ಪೇಟೆ ಠಾಣೆ ಪೊಲೀಸರು ಆತನಿಂದ ಸುಮಾರು 22.20 ಲಕ್ಷರೂ ಬೆಲೆಯ 11 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ವಿ.ಕೋಟೆಯ ಎಸ್.ಸುಭಾನ್ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಕೋಲಾರ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಗುತ್ತಿದ್ದ ದ್ವಿಚಕ್ರ ವಾಹನಗಳ ಕಳುವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಎಸ್ಪಿ ಬಿ.ನಿಖಿಲ್, ಎಎಸ್ಪಿಗಳಾದ ರವಿಶಂಕರ್, ಜಗದೀಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಂ.ಎಚ್.ನಾಗ್ತೆ ನೇತೃತ್ವದಲ್ಲಿ ಗಲ್‌ಪೇಟೆ ಸಿಪಿಐ ಎಂ.ಜೆ.ಲೋಕೇಶ್, ಪಿಎಸ್‌ಐ ವಿಠಲ್ ತಳವಾರ್ ಹಾಗೂ ಎಎಸ್‌ಐ ಮುನಿವೆಂಕಟಸ್ವಾಮಿ, ಸಿಬ್ಬಂದಿ ಶಫೀಉಲ್ಲಾ, ರಮೇಶ್, ರಾಜೇಶ್, ಸದಾಶಿವ, ಮಂಜುನಾಥ ಅವರ ವಿಶೇಷ ತಂಡ ರಚಿಸಲಾಗಿತ್ತು.

ಆರೋಪಿಯನ್ನು ದಸ್ತಗಿರಿ ಮಾಡಲಾಗಿ ಆತನು ನೀಡಿದ ಮಾಹಿತಿಯ ಮೇರೆಗೆ ಕಳ್ಳತನ ಮಾಡಿದ್ದ ಸುಮಾರು 22.20.000 ರೂ. ಬೆಲೆ ಬಾಳುವ 6 ಬುಲೆಟ್, 1 ಆರ್15 ಯಮಹ, 1 ಸುಜುಕಿ, 1 ಆಕ್ಸಿಸ್, 1 ಆಕ್ಟಿವ, 1 ಪ್ಯಾಷನ್ ಫ್ರೋ ದ್ವಿಚಕ್ರ ವಾಹನಗಳನ್ನು ಅಮಾನತು ಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆಯನ್ನು ಎಸ್ಪಿ ಬಿ.ನಿಖಿಲ್ ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago