Categories: ಕೋಲಾರ

ದ್ವಿಚಕ್ರ ವಾಹನ ಕಳ್ಳನ ಬಂಧನ: 11 ದ್ವಿಚಕ್ರ ವಾಹನಗಳ ವಶ

ಕೋಲಾರ: ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿರುವ ಕೋಲಾರದ ಗಲ್‌ಪೇಟೆ ಠಾಣೆ ಪೊಲೀಸರು ಆತನಿಂದ ಸುಮಾರು 22.20 ಲಕ್ಷರೂ ಬೆಲೆಯ 11 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ವಿ.ಕೋಟೆಯ ಎಸ್.ಸುಭಾನ್ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಕೋಲಾರ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಗುತ್ತಿದ್ದ ದ್ವಿಚಕ್ರ ವಾಹನಗಳ ಕಳುವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಎಸ್ಪಿ ಬಿ.ನಿಖಿಲ್, ಎಎಸ್ಪಿಗಳಾದ ರವಿಶಂಕರ್, ಜಗದೀಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಂ.ಎಚ್.ನಾಗ್ತೆ ನೇತೃತ್ವದಲ್ಲಿ ಗಲ್‌ಪೇಟೆ ಸಿಪಿಐ ಎಂ.ಜೆ.ಲೋಕೇಶ್, ಪಿಎಸ್‌ಐ ವಿಠಲ್ ತಳವಾರ್ ಹಾಗೂ ಎಎಸ್‌ಐ ಮುನಿವೆಂಕಟಸ್ವಾಮಿ, ಸಿಬ್ಬಂದಿ ಶಫೀಉಲ್ಲಾ, ರಮೇಶ್, ರಾಜೇಶ್, ಸದಾಶಿವ, ಮಂಜುನಾಥ ಅವರ ವಿಶೇಷ ತಂಡ ರಚಿಸಲಾಗಿತ್ತು.

ಆರೋಪಿಯನ್ನು ದಸ್ತಗಿರಿ ಮಾಡಲಾಗಿ ಆತನು ನೀಡಿದ ಮಾಹಿತಿಯ ಮೇರೆಗೆ ಕಳ್ಳತನ ಮಾಡಿದ್ದ ಸುಮಾರು 22.20.000 ರೂ. ಬೆಲೆ ಬಾಳುವ 6 ಬುಲೆಟ್, 1 ಆರ್15 ಯಮಹ, 1 ಸುಜುಕಿ, 1 ಆಕ್ಸಿಸ್, 1 ಆಕ್ಟಿವ, 1 ಪ್ಯಾಷನ್ ಫ್ರೋ ದ್ವಿಚಕ್ರ ವಾಹನಗಳನ್ನು ಅಮಾನತು ಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆಯನ್ನು ಎಸ್ಪಿ ಬಿ.ನಿಖಿಲ್ ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

11 hours ago

ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…

12 hours ago

ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…

13 hours ago

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

2 days ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

2 days ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago