ಕೋಲಾರ: ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿರುವ ಕೋಲಾರದ ಗಲ್ಪೇಟೆ ಠಾಣೆ ಪೊಲೀಸರು ಆತನಿಂದ ಸುಮಾರು 22.20 ಲಕ್ಷರೂ ಬೆಲೆಯ 11 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ವಿ.ಕೋಟೆಯ ಎಸ್.ಸುಭಾನ್ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಕೋಲಾರ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಗುತ್ತಿದ್ದ ದ್ವಿಚಕ್ರ ವಾಹನಗಳ ಕಳುವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಎಸ್ಪಿ ಬಿ.ನಿಖಿಲ್, ಎಎಸ್ಪಿಗಳಾದ ರವಿಶಂಕರ್, ಜಗದೀಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಂ.ಎಚ್.ನಾಗ್ತೆ ನೇತೃತ್ವದಲ್ಲಿ ಗಲ್ಪೇಟೆ ಸಿಪಿಐ ಎಂ.ಜೆ.ಲೋಕೇಶ್, ಪಿಎಸ್ಐ ವಿಠಲ್ ತಳವಾರ್ ಹಾಗೂ ಎಎಸ್ಐ ಮುನಿವೆಂಕಟಸ್ವಾಮಿ, ಸಿಬ್ಬಂದಿ ಶಫೀಉಲ್ಲಾ, ರಮೇಶ್, ರಾಜೇಶ್, ಸದಾಶಿವ, ಮಂಜುನಾಥ ಅವರ ವಿಶೇಷ ತಂಡ ರಚಿಸಲಾಗಿತ್ತು.
ಆರೋಪಿಯನ್ನು ದಸ್ತಗಿರಿ ಮಾಡಲಾಗಿ ಆತನು ನೀಡಿದ ಮಾಹಿತಿಯ ಮೇರೆಗೆ ಕಳ್ಳತನ ಮಾಡಿದ್ದ ಸುಮಾರು 22.20.000 ರೂ. ಬೆಲೆ ಬಾಳುವ 6 ಬುಲೆಟ್, 1 ಆರ್15 ಯಮಹ, 1 ಸುಜುಕಿ, 1 ಆಕ್ಸಿಸ್, 1 ಆಕ್ಟಿವ, 1 ಪ್ಯಾಷನ್ ಫ್ರೋ ದ್ವಿಚಕ್ರ ವಾಹನಗಳನ್ನು ಅಮಾನತು ಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆಯನ್ನು ಎಸ್ಪಿ ಬಿ.ನಿಖಿಲ್ ಶ್ಲಾಘಿಸಿದ್ದಾರೆ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…