ದ್ವಿತೀಯ ಪಿಯುಸಿ ಫಲಿತಾಂಶ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶೇಕಡಾ 56% ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ದೊಡ್ಡಬಳ್ಳಾಪುರ (ತೂಬಗೆರೆ): ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ತೃಪ್ತಿದಾಯಕವಾಗಿದೆ.

ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿದ್ದು, ಹಲವು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಧರ್ಮರಾಜು ಎನ್ -539 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು, ಇತಿಹಾಸ ವಿಷಯದಲ್ಲಿ 100 ಅಂಕಗಳನ್ನು ಪಡೆದಿದ್ದಾರೆ.

ಚಂದ್ರಶೇಖರ್ ಎಸ್-510   ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿ ಪಡೆದುಕೊಂಡಿದ್ದಾರೆ. ನೇತ್ರಾವತಿ -488, ಮೋಹನ್ ಎನ್ -455, ರಮ್ಯ -454, ಮೌನಿಕ-422, ನವ್ಯ -406, ವೇದಾವತಿ ಆರ್ -401…

ವಿಜ್ಞಾನ ವಿಭಾಗದಲ್ಲಿ ಲಾವಣ್ಯ -485, ಅಂಕಗಳು, ಕಲಾ ವಿಭಾಗದಲ್ಲಿ ಅಂಕಿತ ಜಿ-462, ಬೇಬಿ ಬಿ.ಆರ್ -445, ಹಂಸವೇಣಿ -436, ರಶ್ಮಿ-428, ಬಿಂದುಶ್ರೀ ಎನ್. ಎಸ್-408, ಲಕ್ಶ್ಮೀಷ-400 ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ  ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಒಟ್ಟಾರೆ ಅತ್ಯುನ್ನತ ಶ್ರೇಣಿ -02, ಪ್ರಥಮ ದರ್ಜೆ -17, ದ್ವಿತೀಯ ದರ್ಜೆ -12,ತೃತೀಯ ದರ್ಜೆ -3 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು,  ಉಪನ್ಯಾಸಕವೃಂದ ದವರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಶುಭ ಹಾರೈಕೆಗಳೊಂದಿಗೆ  ಅಭಿನಂದಿಸಿದ್ದಾರೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

23 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

56 minutes ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

3 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago