ದ್ವಿತೀಯ ಪಿಯುಸಿ ಫಲಿತಾಂಶ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶೇಕಡಾ 56% ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ದೊಡ್ಡಬಳ್ಳಾಪುರ (ತೂಬಗೆರೆ): ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ತೃಪ್ತಿದಾಯಕವಾಗಿದೆ.

ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿದ್ದು, ಹಲವು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಧರ್ಮರಾಜು ಎನ್ -539 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು, ಇತಿಹಾಸ ವಿಷಯದಲ್ಲಿ 100 ಅಂಕಗಳನ್ನು ಪಡೆದಿದ್ದಾರೆ.

ಚಂದ್ರಶೇಖರ್ ಎಸ್-510   ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿ ಪಡೆದುಕೊಂಡಿದ್ದಾರೆ. ನೇತ್ರಾವತಿ -488, ಮೋಹನ್ ಎನ್ -455, ರಮ್ಯ -454, ಮೌನಿಕ-422, ನವ್ಯ -406, ವೇದಾವತಿ ಆರ್ -401…

ವಿಜ್ಞಾನ ವಿಭಾಗದಲ್ಲಿ ಲಾವಣ್ಯ -485, ಅಂಕಗಳು, ಕಲಾ ವಿಭಾಗದಲ್ಲಿ ಅಂಕಿತ ಜಿ-462, ಬೇಬಿ ಬಿ.ಆರ್ -445, ಹಂಸವೇಣಿ -436, ರಶ್ಮಿ-428, ಬಿಂದುಶ್ರೀ ಎನ್. ಎಸ್-408, ಲಕ್ಶ್ಮೀಷ-400 ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ  ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಒಟ್ಟಾರೆ ಅತ್ಯುನ್ನತ ಶ್ರೇಣಿ -02, ಪ್ರಥಮ ದರ್ಜೆ -17, ದ್ವಿತೀಯ ದರ್ಜೆ -12,ತೃತೀಯ ದರ್ಜೆ -3 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು,  ಉಪನ್ಯಾಸಕವೃಂದ ದವರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಶುಭ ಹಾರೈಕೆಗಳೊಂದಿಗೆ  ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

28 minutes ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

7 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

20 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

22 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

1 day ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago