2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಇಂದು (ಏ.8) ಪ್ರಕಟವಾಗಿದೆ.
https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
7.13 ಲಕ್ಷ ವಿದ್ಯಾರ್ಥಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ 1 ರಿಸಲ್ಟ್ ಇಂದು ಬಿಡುಗಡೆ ಆಗಿದೆ. ಪರೀಕ್ಷೆ ಬರೆದವರು ತಮ್ಮ ರಿಜಿಸ್ಟರ್ ನಂಬರ್ ಮೂಲಕ ಕೆಎಸ್ಇಎಬಿ ನೀಡುವ https://karresults.nic.in ಜಾಲತಾಣದಲ್ಲಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು.
ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟ
ರಾಜ್ಯದಲ್ಲಿ ಉಡುಪಿ (93.90)ಟಾಪರ್, ದ್ವಿತೀಯ ಹಾಗೂ ತೃತೀಯ ಸ್ಥಾನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ, ಯಾದಗಿರಿಗೆ ಕೊನೆಯ ಸ್ಥಾನ ಶೇ.73.45.
ರಾಜ್ಯದಲ್ಲಿ ಒಟ್ಟು ಶೇಕಡ 73.45ರಷ್ಟು ಉತ್ತೀರ್ಣರಾದ ವಿದ್ಯಾರ್ಥಿಗಳು
ಕಲಾ ಸಂಯೋಜನೆಯಲ್ಲಿ ಶೇಕಡ.53.29 ಫಲಿತಾಂಶ, ವಾಣಿಜ್ಯ ಸಂಯೋಜನೆಯಲ್ಲಿ ಶೇಕಡ.76.07, ವಿಜ್ಞಾನ ಸಂಯೋಜನೆಯಲ್ಲಿ ಶೇಕಡ.82.54 ಫಲಿತಾಂಶ ಬಂದಿದೆ.
ಈ ಬಾರಿ 73.4% ಮಕ್ಕಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 57%, ಅನುದಾನಿತ ಕಾಲೇಜುಗಳಲ್ಲಿ 60%, ಅನುದಾನ ರಹಿತ ಕಾಲೇಜುಗಳಲ್ಲಿ 90%, ವಸತಿ ಶಾಲೆಗಳಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ 1 ರಲ್ಲಿ ಒಟ್ಟಾರೆ 1,99,227 ಬಾಲಕರು, 2,69,212 ಬಾಲಕಿಯರು ತೇರ್ಗಡೆ ಆಗಿದ್ದಾರೆ.
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…