ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದ ಸಂಜನಾ ಬಾಯಿ

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಇಂದು (ಏ.8) ಪ್ರಕಟವಾಗಿದೆ.

https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

7.13 ಲಕ್ಷ ವಿದ್ಯಾರ್ಥಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ 1 ರಿಸಲ್ಟ್‌ ಇಂದು ಬಿಡುಗಡೆ ಆಗಿದೆ. ಪರೀಕ್ಷೆ ಬರೆದವರು ತಮ್ಮ ರಿಜಿಸ್ಟರ್ ನಂಬರ್ ಮೂಲಕ ಕೆಎಸ್‌ಇಎಬಿ ನೀಡುವ https://karresults.nic.in ಜಾಲತಾಣದಲ್ಲಿ ಫಲಿತಾಂಶ ಚೆಕ್‌ ಮಾಡಿಕೊಳ್ಳಬಹುದು.

ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟ
ರಾಜ್ಯದಲ್ಲಿ ಉಡುಪಿ (93.90)ಟಾಪರ್, ದ್ವಿತೀಯ ಹಾಗೂ ತೃತೀಯ ಸ್ಥಾನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ, ಯಾದಗಿರಿಗೆ ಕೊನೆಯ ಸ್ಥಾನ ಶೇ.73.45.

ರಾಜ್ಯದಲ್ಲಿ ಒಟ್ಟು ಶೇಕಡ 73.45ರಷ್ಟು ಉತ್ತೀರ್ಣರಾದ ವಿದ್ಯಾರ್ಥಿಗಳು

ಕಲಾ ಸಂಯೋಜನೆಯಲ್ಲಿ ಶೇಕಡ.53.29 ಫಲಿತಾಂಶ, ವಾಣಿಜ್ಯ ಸಂಯೋಜನೆಯಲ್ಲಿ ಶೇಕಡ.76.07, ವಿಜ್ಞಾನ ಸಂಯೋಜನೆಯಲ್ಲಿ ಶೇಕಡ.82.54 ಫಲಿತಾಂಶ ಬಂದಿದೆ.

ಈ ಬಾರಿ 73.4% ಮಕ್ಕಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 57%, ಅನುದಾನಿತ ಕಾಲೇಜುಗಳಲ್ಲಿ 60%, ಅನುದಾನ ರಹಿತ ಕಾಲೇಜುಗಳಲ್ಲಿ 90%, ವಸತಿ ಶಾಲೆಗಳಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ 1 ರಲ್ಲಿ ಒಟ್ಟಾರೆ 1,99,227 ಬಾಲಕರು, 2,69,212 ಬಾಲಕಿಯರು ತೇರ್ಗಡೆ ಆಗಿದ್ದಾರೆ.

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್​ ಆಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

4 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

6 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

10 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

11 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

13 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

13 hours ago