2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಇಂದು (ಏ.8) ಪ್ರಕಟವಾಗಿದೆ.
https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
7.13 ಲಕ್ಷ ವಿದ್ಯಾರ್ಥಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ 1 ರಿಸಲ್ಟ್ ಇಂದು ಬಿಡುಗಡೆ ಆಗಿದೆ. ಪರೀಕ್ಷೆ ಬರೆದವರು ತಮ್ಮ ರಿಜಿಸ್ಟರ್ ನಂಬರ್ ಮೂಲಕ ಕೆಎಸ್ಇಎಬಿ ನೀಡುವ https://karresults.nic.in ಜಾಲತಾಣದಲ್ಲಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು.
ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟ
ರಾಜ್ಯದಲ್ಲಿ ಉಡುಪಿ (93.90)ಟಾಪರ್, ದ್ವಿತೀಯ ಹಾಗೂ ತೃತೀಯ ಸ್ಥಾನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ, ಯಾದಗಿರಿಗೆ ಕೊನೆಯ ಸ್ಥಾನ ಶೇ.73.45.
ರಾಜ್ಯದಲ್ಲಿ ಒಟ್ಟು ಶೇಕಡ 73.45ರಷ್ಟು ಉತ್ತೀರ್ಣರಾದ ವಿದ್ಯಾರ್ಥಿಗಳು
ಕಲಾ ಸಂಯೋಜನೆಯಲ್ಲಿ ಶೇಕಡ.53.29 ಫಲಿತಾಂಶ, ವಾಣಿಜ್ಯ ಸಂಯೋಜನೆಯಲ್ಲಿ ಶೇಕಡ.76.07, ವಿಜ್ಞಾನ ಸಂಯೋಜನೆಯಲ್ಲಿ ಶೇಕಡ.82.54 ಫಲಿತಾಂಶ ಬಂದಿದೆ.
ಈ ಬಾರಿ 73.4% ಮಕ್ಕಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 57%, ಅನುದಾನಿತ ಕಾಲೇಜುಗಳಲ್ಲಿ 60%, ಅನುದಾನ ರಹಿತ ಕಾಲೇಜುಗಳಲ್ಲಿ 90%, ವಸತಿ ಶಾಲೆಗಳಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ 1 ರಲ್ಲಿ ಒಟ್ಟಾರೆ 1,99,227 ಬಾಲಕರು, 2,69,212 ಬಾಲಕಿಯರು ತೇರ್ಗಡೆ ಆಗಿದ್ದಾರೆ.
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…